ರಾಜ್ಯ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ ರವಾನಿಸಲಾಯಿತು.

ಬೃಹತ್ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆಗಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು.

ಫೆಬ್ರವರಿ 24ರಂದು ಪ್ರತಿಭಟನೆ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘವು ಪೊಲೀಸ್ ಇಲಾಖೆಯಿಂದ ಅನುಮತಿ ಕೇಳಿತ್ತು, ಆದರೆ ಪೊಲೀಸರು ಪರವಾನಗಿ ನೀಡಲು ಹಿಂದೇಟು ಹಾಕಿದ್ದರು. ಆದರೆ, ಇದೇ ಉದ್ದೇಶಕ್ಕಾಗಿ ಬಿಜೆಪಿ ಮುಖಂಡರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಾತ್ರ ಅನುಮತಿ ನೀಡಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಶ್ರೀನಗರ ವೃತ್ತದ ಬಳಿ ಯುವಕರನ್ನು ತಡೆದು ನಿಲ್ಲಿಸಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ಫೋಟೋಗಳನ್ನು ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಖಾಲಿ ಹುದ್ದೆಗಳನ್ನು ತುಂಬುವಂತೆ ಮತ್ತು ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿದರು. ಬ್ಯಾರಿಕೇಡ್‍ಗಳನ್ನು ತಳ್ಳಿ ಮುನ್ನುಗ್ಗಿದ ವಿದ್ಯಾರ್ಥಿಗಳು ರಾಲಿಯನ್ನು ಆರಂಭಿಸಿದರು. ಪೊಲೀಸರು ರಾಲಿಯನ್ನು ತಡೆಯಲು ಮುಂದಾಗಿದ್ದು, ಇದರಿಂದ ತಳ್ಳಾಟ ನೂಕಾಟ ನಡೆದಿದೆ. ಜೈನಗರ ಸರ್ಕಲ್‍ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಯಂತಹ ಸ್ಥಿತಿ ಉಂಟಾಯಿತು.

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಮತ್ತು ಯುವಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರ ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ ನಡೆಸಿ ತಮ ಅಸಮಾಧಾನ ಹೊರಹಾಕಿದರು. ಸರ್ಕಾರವು ಉದ್ಯೋಗ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ತಕ್ಷಣ ಸ್ಪಷ್ಟ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago