ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ ಕಾಂಗ್ರೆಸ್ ಸೇರಿದ್ದೇನೆ. ಮೈತ್ರಿ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿದೆ. ಈ ಕಾರಣಕ್ಕಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಅದರ ಹೊರತಾಗಿ ಏನೂ ಇಲ್ಲ. ಕಳೆದ ಎರಡೂ ಮೂರು ತಿಂಗಳಿನಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ತೀವ್ರ ಅಸಮಾಧಾನ ಮೂಡಿಸಿವೆ. ನಾವು ಕಟ್ಟಿದ ಮನೆಯಲ್ಲಿ ನಮಗೆ ವಾಸ ಮಾಡಲು ಆಗುವುದಿಲ್ಲ. ಈ ಹಿಂದೆ ನಾನು ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ನಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದೆ. ಈಗ ಮತ್ತೆ ಡಿಕೆಶಿ ಅವರ ನೇತೃತ್ವದಲ್ಲೇ ಕಾಂಗ್ರೆಸ್ಗೆ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷದ ಎಲ್ಲರೊಂದಿಗೆ ಒಟ್ಟುಗೂಡಿ ಶ್ರಮ ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…
ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…
ಇತ್ತೀಚಿನ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್ಪಿಜಿ ಸಿಲಿಂಡರ್ಗಳನ್ನು…
ಹೆಚ್.ಎಸ್. ದಿನೇಶ್ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…