ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ ಕಾಂಗ್ರೆಸ್ ಸೇರಿದ್ದೇನೆ. ಮೈತ್ರಿ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿದೆ. ಈ ಕಾರಣಕ್ಕಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಅದರ ಹೊರತಾಗಿ ಏನೂ ಇಲ್ಲ. ಕಳೆದ ಎರಡೂ ಮೂರು ತಿಂಗಳಿನಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ತೀವ್ರ ಅಸಮಾಧಾನ ಮೂಡಿಸಿವೆ. ನಾವು ಕಟ್ಟಿದ ಮನೆಯಲ್ಲಿ ನಮಗೆ ವಾಸ ಮಾಡಲು ಆಗುವುದಿಲ್ಲ. ಈ ಹಿಂದೆ ನಾನು ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ನಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದೆ. ಈಗ ಮತ್ತೆ ಡಿಕೆಶಿ ಅವರ ನೇತೃತ್ವದಲ್ಲೇ ಕಾಂಗ್ರೆಸ್ಗೆ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷದ ಎಲ್ಲರೊಂದಿಗೆ ಒಟ್ಟುಗೂಡಿ ಶ್ರಮ ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…