ರಾಜ್ಯ

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯ ಹಣ ಕೆಯುಡಬ್ಲೂಜೆ ದತ್ತಿಗೆ; ಡಾ.ರಾಜಾ ರಾಮಣ್ಣ ಪ್ರಶಸ್ತಿ ಸ್ಥಾಪನೆಗೆ ನಿರ್ಧರಿಸಿದ ಗಿರೀಶ್ ಲಿಂಗಣ್ಣ

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಸಂಘಕ್ಕೆ ಅಧಿಕೃತವಾಗಿ ಪತ್ರ ಬರೆದು ತಮ್ಮ ನಿರ್ಧಾರ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ವಾಗತಿಸಿದ್ದಾರೆ.

ಕರ್ನಾಟಕದಲ್ಲಿ ವಿಜ್ಞಾನ ಬರಹಗಾರರಿಗೆ, ವಿಜ್ಞಾನ ಸಂವಾಹಕರಿಗೆ ಹೆಚ್ಚಿನ ಉತ್ತೇಜನ, ಬೆಂಬಲ ನೀಡುವ ನಿಟ್ಟಿನಲ್ಲಿ, ನಾನು ಈ ಪ್ರಶಸ್ತಿಯೊಡನೆ ನೀಡಲಾಗುವ ಒಂದು ಲಕ್ಷ ರೂ ಮೊತ್ತವನ್ನು ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘಕ್ಕೆ (ಕೆಯುಡಬ್ಲ್ಯುಜೆ) ಹಸ್ತಾಂತರಿಸುತ್ತೇನೆ. ಈ ಮೊತ್ತದಿಂದ ನಮ್ಮ ರಾಜ್ಯದ ಪ್ರಸಿದ್ಧ ವಿಜ್ಞಾನಿ ಡಾ. ರಾಜಾ ರಾಮಣ್ಣನವರ ಹೆಸರಿನಲ್ಲಿ ದತ್ತಿ ನಿಧಿ ಪ್ರಶಸ್ತಿಯನ್ನು ಸ್ಥಾಪಿಸಬೇಕೆಂದು ಗಿರೀಶ್ ಲಿಂಗಣ್ಣ ಮನವಿ ಮಾಡಿದ್ದಾರೆ.

ವಿಜ್ಞಾನ, ರಕ್ಷಣೆ, ಬಾಹ್ಯಾಕಾಶದಂತಹ ಸಂಕೀರ್ಣ ವಿಚಾರಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ (ಕನ್ನಡ ಅಥವಾ ಇಂಗ್ಲೀಷ್)ಪತ್ರಕರ್ತರು, ಅಂಕಣಕಾರರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಬೇಕು. ಹೆಚ್ಚು ಬರಹಗಾರರು ಇಂತಹ ಪ್ರಮುಖ ವಿಚಾರಗಳ ಕುರಿತು ಬರೆಯುವಂತೆ ಮಾಡುವುದು ಮತ್ತು ಯುವ ಮನಸ್ಸುಗಳನ್ನು ಆಸಕ್ತಿಕರ ವೈಜ್ಞಾನಿಕ ಬರಹಗಳಿಂದ ಸೆಳೆಯುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಡಾ.ರಾಜರಾಮಣ್ಣ ಪ್ರಶಸ್ತಿ; ಕೆಯುಡಬ್ಲೂಜೆ ಅಭಿನಂದನೆ:
ಅಂಕಣಕಾರ ಗಿರೀಶ್ ಲಿಂಗಣ್ಣ ಅವರ ಆಶಯದಂತೆಯೇ ಕೆಯುಡಬ್ಲೂಜೆ ಡಾ.ರಾಜರಾಮಣ್ಣ ಹೆಸರಿನಲ್ಲಿ ದತ್ತಿನಿಧಿಯನ್ನು ಸ್ಥಾಪಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಪುತ್ರರಾದ ಡಾ. ರಾಜಾ ರಾಮಣ್ಣ ಜಗತ್ತು ಕಂಡ ಶ್ರೇಷ್ಠ ಪರಮಾಣು ವಿಜ್ಞಾನಿಗಳಲ್ಲಿ ಒಬ್ಬರು. ಭಾರತದ ವೈಜ್ಞಾನಿಕ ಪ್ರಗತಿಯ ಹಿಂದೆ ಡಾ. ರಾಜಾ ರಾಮಣ್ಣನವರ ಕೊಡುಗೆ ಅಪಾರವಾಗಿದೆ. ಈ ಬಹುಮಾನವನ್ನು ವಿಜ್ಞಾನ ವಿಚಾರಗಳು ಎಲ್ಲರಿಗೂ ತಲುಪುವಂತೆ ಮಾಡುವ ಪತ್ರಕರ್ತರಿಗೆ ಪ್ರತಿ ವರ್ಷವೂ ನೀಡಲಾಗುವುದು ಎಂದು ತಿಳಿಸಿರುವ ತಗಡೂರು ಅವರು, ಗಿರೀಶ್ ಲಿಂಗಣ್ಣ ಅವರನ್ನು ಅಭಿನಂದಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

14 mins ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

21 mins ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

37 mins ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

3 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

4 hours ago