ರಾಜ್ಯ

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯ ಹಣ ಕೆಯುಡಬ್ಲೂಜೆ ದತ್ತಿಗೆ; ಡಾ.ರಾಜಾ ರಾಮಣ್ಣ ಪ್ರಶಸ್ತಿ ಸ್ಥಾಪನೆಗೆ ನಿರ್ಧರಿಸಿದ ಗಿರೀಶ್ ಲಿಂಗಣ್ಣ

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಸಂಘಕ್ಕೆ ಅಧಿಕೃತವಾಗಿ ಪತ್ರ ಬರೆದು ತಮ್ಮ ನಿರ್ಧಾರ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ವಾಗತಿಸಿದ್ದಾರೆ.

ಕರ್ನಾಟಕದಲ್ಲಿ ವಿಜ್ಞಾನ ಬರಹಗಾರರಿಗೆ, ವಿಜ್ಞಾನ ಸಂವಾಹಕರಿಗೆ ಹೆಚ್ಚಿನ ಉತ್ತೇಜನ, ಬೆಂಬಲ ನೀಡುವ ನಿಟ್ಟಿನಲ್ಲಿ, ನಾನು ಈ ಪ್ರಶಸ್ತಿಯೊಡನೆ ನೀಡಲಾಗುವ ಒಂದು ಲಕ್ಷ ರೂ ಮೊತ್ತವನ್ನು ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘಕ್ಕೆ (ಕೆಯುಡಬ್ಲ್ಯುಜೆ) ಹಸ್ತಾಂತರಿಸುತ್ತೇನೆ. ಈ ಮೊತ್ತದಿಂದ ನಮ್ಮ ರಾಜ್ಯದ ಪ್ರಸಿದ್ಧ ವಿಜ್ಞಾನಿ ಡಾ. ರಾಜಾ ರಾಮಣ್ಣನವರ ಹೆಸರಿನಲ್ಲಿ ದತ್ತಿ ನಿಧಿ ಪ್ರಶಸ್ತಿಯನ್ನು ಸ್ಥಾಪಿಸಬೇಕೆಂದು ಗಿರೀಶ್ ಲಿಂಗಣ್ಣ ಮನವಿ ಮಾಡಿದ್ದಾರೆ.

ವಿಜ್ಞಾನ, ರಕ್ಷಣೆ, ಬಾಹ್ಯಾಕಾಶದಂತಹ ಸಂಕೀರ್ಣ ವಿಚಾರಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ (ಕನ್ನಡ ಅಥವಾ ಇಂಗ್ಲೀಷ್)ಪತ್ರಕರ್ತರು, ಅಂಕಣಕಾರರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಬೇಕು. ಹೆಚ್ಚು ಬರಹಗಾರರು ಇಂತಹ ಪ್ರಮುಖ ವಿಚಾರಗಳ ಕುರಿತು ಬರೆಯುವಂತೆ ಮಾಡುವುದು ಮತ್ತು ಯುವ ಮನಸ್ಸುಗಳನ್ನು ಆಸಕ್ತಿಕರ ವೈಜ್ಞಾನಿಕ ಬರಹಗಳಿಂದ ಸೆಳೆಯುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಡಾ.ರಾಜರಾಮಣ್ಣ ಪ್ರಶಸ್ತಿ; ಕೆಯುಡಬ್ಲೂಜೆ ಅಭಿನಂದನೆ:
ಅಂಕಣಕಾರ ಗಿರೀಶ್ ಲಿಂಗಣ್ಣ ಅವರ ಆಶಯದಂತೆಯೇ ಕೆಯುಡಬ್ಲೂಜೆ ಡಾ.ರಾಜರಾಮಣ್ಣ ಹೆಸರಿನಲ್ಲಿ ದತ್ತಿನಿಧಿಯನ್ನು ಸ್ಥಾಪಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಪುತ್ರರಾದ ಡಾ. ರಾಜಾ ರಾಮಣ್ಣ ಜಗತ್ತು ಕಂಡ ಶ್ರೇಷ್ಠ ಪರಮಾಣು ವಿಜ್ಞಾನಿಗಳಲ್ಲಿ ಒಬ್ಬರು. ಭಾರತದ ವೈಜ್ಞಾನಿಕ ಪ್ರಗತಿಯ ಹಿಂದೆ ಡಾ. ರಾಜಾ ರಾಮಣ್ಣನವರ ಕೊಡುಗೆ ಅಪಾರವಾಗಿದೆ. ಈ ಬಹುಮಾನವನ್ನು ವಿಜ್ಞಾನ ವಿಚಾರಗಳು ಎಲ್ಲರಿಗೂ ತಲುಪುವಂತೆ ಮಾಡುವ ಪತ್ರಕರ್ತರಿಗೆ ಪ್ರತಿ ವರ್ಷವೂ ನೀಡಲಾಗುವುದು ಎಂದು ತಿಳಿಸಿರುವ ತಗಡೂರು ಅವರು, ಗಿರೀಶ್ ಲಿಂಗಣ್ಣ ಅವರನ್ನು ಅಭಿನಂದಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago