ರಾಜ್ಯ

ಪತ್ರಿಕೋದ್ಯಮ ಪ್ರಭಾವಶಾಲಿ ಉದ್ಯಮ : ಸಂಸದ ಬೊಮ್ಮಾಯಿ

ಬೆಂಗಳೂರು : ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶೇಷಾದ್ರಿಪುರಂ ಕಾಲೇಜಿನಲ್ಲಿ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನನ್ನ ಆತ್ಮೀಯ ಸ್ನೇಹಿತನಿಗೆ ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು ಖಾದ್ರಿ ಶಾಮಣ್ಣ ಅವರನ್ನು 1978 ರಲ್ಲಿ ನೋಡಿದಾಗ ತುರ್ತುಪರಿಸ್ಥಿತಿ ಮುಗಿದಿತ್ತು. ಇಡಿ ವಿಶ್ವದಲ್ಲಿ ವೈಎನ್ ಕೆ ಅವರ ಹೆಸರಿತ್ತು. ಕರ್ನಾಟಕದಲ್ಲಿ ಎಮರ್ಜೆನ್ಸಿ ವಿರುದ್ದ ಸಿಡಿದೆದ್ದ ವ್ಯಕ್ತಿ ಖಾದ್ರಿ ಶಾಮಣ್ಣ ಅವರು, ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಇರುವ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಎಂದು ಹೇಳಿದರು.

ಖಾದ್ರಿ ಶಾಮಣ್ಣ ಅವರು ಬಹಳ ಪ್ರಭಾವಶಾಲಿ ಆಗಿದ್ದರು. ಅವರು ಬದುಕಿಗ ಮುಂದೆ ಬರುವ ಸರ್ಕಾರಗಳು ಅವರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಪತ್ರಿಕೋದ್ಯಮ ಬಹಳ ಕ್ಲಿಷ್ಟವಾಗಿರುತ್ತದೆ ಕೆಲವು ಸಾರಿ ಪರ ಮತ್ತು ವಿರೋಧ ಅಭಿಪ್ರಾಯಗಳು ಬಂದಾಗ ಸತ್ಯದ ಮೇಲೆ ನಿಲುವು ತೆಗೆದುಕೊಂಡಾಗ ಅದಕ್ಕೆ ಮಹತ್ವ ಬರುತ್ತದೆ. ಕೆಲವು ಸಾರಿ ತಾವು ತೆಗೆದುಕೊಂಡ ನಿಲುವಿನ ವಿರುದ್ಧ ತೀರ್ಮಾನ ತೆಗೆದುಕೊಳ್ಳುವ ಸಂದರ್ಭ ಬರಬಹುದು. ಆಗ ಸ್ಪಷ್ಟವಾಗಿ ನಿಲುವು ತೆಗೆದುಕೊಳ್ಳಬೇಕು. ಖಾದ್ರಿ ಶಾಮಣ್ಣ ಅಂತಹ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿದ್ದರು. ಅಂತಹವರ ಗರಡಿಯಲ್ಲಿ ಕೂಡ್ಲಿ ಗುರುರಾಜ್ ಬೆಳೆದಿದ್ದಾರೆ. ಹುಬ್ಬಳ್ಳಿಯಲ್ಲಿ ಕನ್ನಡ ಪ್ರಭದಲ್ಲಿ ಇವರು ಇದ್ದಾಗ ಅವರ ಲೇಖನಗಳನ್ನು ಓದಿದೆ. 1998 ರಲ್ಲಿ ನಾನು ಸ್ಥಳೀಯ ಸಂಸ್ಥೆಯಿಂದ ಚುನಾವಣೆ ನಿಂತಿದೆ, ನಮ್ಮ ಪಕ್ಷದಲ್ಲಿ ಬಂಡಾಯ ಅಭ್ಯರ್ಥಿ ನಿಂತಿದ್ದರು. ಆಗ ಎಲ್ಲ ಪತ್ರಿಕೆಯವರು 24 ದಿನ ನನ್ನ ವಿರುದ್ಧ ಬರೆದಿದ್ದರು. ಒಬ್ಬರು ಪತ್ರಕರ್ತೆ ಸನ್ ಆಸ್ ಸೆಟ್ ಅಂತ ಬರೆದಿದ್ದರು. ಆದರೆ, ನಾನು ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದೆ ಎಂದು ನೆನಪಿಸಿಕೊಂಡರು.

ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ. ರಾಜಕೀಯ ಸುದ್ದಿ ಇಲ್ಲದೆ ಇದ್ದರೆ ಪತ್ರಿಕೆ ಆಕರ್ಷಣೆ ಇರುವುದಿಲ್ಲ. ಅದೇ ರೀತಿ ರಾಜಕಾರಣಿಯ ಸುದ್ದಿಗಳು ಪತ್ರಿಕೆಯಲ್ಲಿ ಬರದಿದ್ದರೆ ಆ ರಾಜಕಾರಣಿಗೆ ಅಸ್ತಿತ್ವವೇ ಇಲ್ಲ. ನನಗೆ ಮದನ ಮೋಹನ್ ಅವರು ಮಾರ್ಗದರ್ಶನ ಮಾಡಿದ್ದರು. ಅವರ ಮಾರ್ಗದರ್ಶನದಿಂದ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚೆ ಮಾಡಿದ್ದೇನೆ. ರಾಮಕೃಷ್ಣ ಹೆಗಡೆ ಅವರು ಮದನ ಮೋಹನ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದಾರಾ ಅಂತ ಕೇಳುತ್ತಿದ್ದರು. ಅವರ ಬಗ್ಗೆ ರಾಜಕಾರಣಿಗಳಿಗೆ ಭಯ ಇತ್ತು ಎಂದರು.

ಯೋಗ್ಯರಿಗೆ ಪ್ರಶಸ್ತಿ :
ಗುರುರಾಜ್ ಅವರು ಉತ್ತರ ಕರ್ನಾಟಕದ ಬಗ್ಗೆ ಸಾಕಷ್ಟು ಲೇಖನಗಳನ್ನು ಬರೆದಿದ್ದಾರೆ. ಅವರು ಎಲ್ಲಿಯೂ ಹೇಳಿಕೊಳ್ಳುವುದಿಲ್ಲ. ಅವರ ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಯೋಗ್ಯ ಪ್ರಶಸ್ತಿ ದೊರೆತಿದೆ. ಅವರಿಗೆ ಅಭಿನಂದನೆ. ಅವರು ನನ್ನಿಂದ ಪ್ರಶಸ್ತಿ ಸ್ವೀಕರಿಸುವ ಆಸೆ ವ್ಯಕ್ತಪಡಿಸಿರುವುದು ನನ್ನ ಮನದಲ್ಲಿ ಯಾವಾಗಲೂ ಉಳಿಯುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ವೂಡೇ ಪಿ. ಕೃಷ್ಣ, ಆಸ್ಸಾಂ ಕೇಂದ್ರಿಯ ವಿವಿ ನಿವೃತ್ತ ಸಮ ಕುಲಪತಿ ಪ್ರೊ. ಕೆ.ವಿ. ನಾಗರಾಜ, ಜಾನಪದ ವಿದ್ವಾಂಸ ಮೀರಾಸಾಬಿಹಳ್ಳಿ ಶಿವಣ್ಣ, ಕೂಡ್ಲಿ ಗುರುರಾಜ್ ಹಾಗೂ ಖಾದ್ತಿ ಶಾಮಣ್ಣ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷ ಎಚ್. ಆರ್.ಶ್ರೀಶ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಹಾಜರಿದ್ದರು
.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

16 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

21 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

40 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

53 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago