ರಾಜ್ಯ

ಪತ್ರಿಕೋದ್ಯಮ ಅಂಬೇಡ್ಕರ್‌ ನುಡಿದಂತೆ ಇರಲಿ: ಕೆ.ವಿ ಪ್ರಭಾಕರ್‌ ಸಲಹೆ

ಬೆಂಗಳೂರು: ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಜನರ, ಸಮಾಜದ ಪ್ರಾಣವಾಯು ಆಗಿರುವ ಪತ್ರಿಕಾ ವೃತ್ತಿಯ ಉಸಿರನ್ನು ಕಾಪಾಡಲು ನಮ್ಮ ಸಂವಿಧಾನ ಇದೆ. ನಮ್ಮ ಸಂವಿಧಾನ ಕತೃ ಆದ ಅಂಬೇಡ್ಕರ್ ಅವರೇ ಹೇಳಿರುವ ರೀತಿ ಪತ್ರಿಕಾ ವೃತ್ತಿ ನಿಜವಾದ ಪ್ರಾಣವಾಯು ಆಗಿ ಉಳಿಯಬೇಕು. ಈ ದಿಕ್ಕಿನಲ್ಲಿ ನಮ್ಮ ಮಾಧ್ಯಮ ಅಕಾಡೆಮಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

ಅಚ್ಚುಮೊಳೆ ಅವಧಿಯಿಂದ ಕೃತಕ ಬುದ್ದಿಮತ್ತೆವರೆಗೂ ಪತ್ರಿಕಾ ವೃತ್ತಿ ಬೆಳೆದಿದೆ. ತಂತ್ರಜ್ಞಾನದಲ್ಲಿ ನಮ್ಮ ವೃತ್ತಿ ಎಷ್ಟೇ ಮುಂದುವರೆದಿದ್ದರೂ ಸತ್ಯ ಮತ್ತು ನಿಷ್ಠುರ ಮೌಲ್ಯಗಳು ಮಾತ್ರ ಬದಲಾಗಬಾರದು. ಆದರೆ ಇಂದು ಊಹಾ ಪತ್ರಿಕೋದ್ಯಮ, ಕಾಲ್ಪನಿಕ ಪತ್ರಿಕೋದ್ಯಮ ಮತ್ತು ಸುಳ್ಳು ಸುದ್ದಿಗಳ ಹಾವಳಿ ಇಂದು ಹೆಚ್ಚಾಗಿದೆ. ಈ ವಿಚಾರದಲ್ಲಿ ನ್ಯೂಸ್ ರೂಮ್ ಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಎರಡು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಿರಲಿಲ್ಲ. ನಮ್ಮ ಇಲಾಖೆಯ ನಾನಾ ವಿಭಾಗಗಳ ಪ್ರಶಸ್ತಿಗಳು ಐದು ವರ್ಷಗಳಿಂದ ಬಾಕಿ ಇದ್ದವು. ನಮ್ಮ ಅವಧಿಯಲ್ಲಿ ಎಲ್ಲವನ್ನೂ ವಿತರಿಸುವ ಕೆಲಸ ಮಾಡಿದ್ದೇವೆ ಎಂದರು.

ಪತ್ರಕರ್ತ ಕುಟುಂಬಗಳ ಆರೋಗ್ಯ, ಆರೋಗ್ಯ ವಿಮೆ, ಉಚಿತ ಬಸ್ ಪಾಸ್, ನಿವೃತ್ತಿ ವೇತನ ಹೆಚ್ಚಳ ಸೇರಿದಂತೆ ಹತ್ತಾರು ವರ್ಷಗಳಿಂದ ಬಾಕಿ ಇದ್ದ ನಮ್ಮ ಸಮುದಾಯದ ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತಿದ್ದೇವೆ ಎಂದು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

19 mins ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

59 mins ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

2 hours ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

2 hours ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

3 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

4 hours ago