ರಾಜ್ಯ

ಪತ್ರಿಕೋದ್ಯಮ ಅಂಬೇಡ್ಕರ್‌ ನುಡಿದಂತೆ ಇರಲಿ: ಕೆ.ವಿ ಪ್ರಭಾಕರ್‌ ಸಲಹೆ

ಬೆಂಗಳೂರು: ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಜನರ, ಸಮಾಜದ ಪ್ರಾಣವಾಯು ಆಗಿರುವ ಪತ್ರಿಕಾ ವೃತ್ತಿಯ ಉಸಿರನ್ನು ಕಾಪಾಡಲು ನಮ್ಮ ಸಂವಿಧಾನ ಇದೆ. ನಮ್ಮ ಸಂವಿಧಾನ ಕತೃ ಆದ ಅಂಬೇಡ್ಕರ್ ಅವರೇ ಹೇಳಿರುವ ರೀತಿ ಪತ್ರಿಕಾ ವೃತ್ತಿ ನಿಜವಾದ ಪ್ರಾಣವಾಯು ಆಗಿ ಉಳಿಯಬೇಕು. ಈ ದಿಕ್ಕಿನಲ್ಲಿ ನಮ್ಮ ಮಾಧ್ಯಮ ಅಕಾಡೆಮಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

ಅಚ್ಚುಮೊಳೆ ಅವಧಿಯಿಂದ ಕೃತಕ ಬುದ್ದಿಮತ್ತೆವರೆಗೂ ಪತ್ರಿಕಾ ವೃತ್ತಿ ಬೆಳೆದಿದೆ. ತಂತ್ರಜ್ಞಾನದಲ್ಲಿ ನಮ್ಮ ವೃತ್ತಿ ಎಷ್ಟೇ ಮುಂದುವರೆದಿದ್ದರೂ ಸತ್ಯ ಮತ್ತು ನಿಷ್ಠುರ ಮೌಲ್ಯಗಳು ಮಾತ್ರ ಬದಲಾಗಬಾರದು. ಆದರೆ ಇಂದು ಊಹಾ ಪತ್ರಿಕೋದ್ಯಮ, ಕಾಲ್ಪನಿಕ ಪತ್ರಿಕೋದ್ಯಮ ಮತ್ತು ಸುಳ್ಳು ಸುದ್ದಿಗಳ ಹಾವಳಿ ಇಂದು ಹೆಚ್ಚಾಗಿದೆ. ಈ ವಿಚಾರದಲ್ಲಿ ನ್ಯೂಸ್ ರೂಮ್ ಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಎರಡು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಿರಲಿಲ್ಲ. ನಮ್ಮ ಇಲಾಖೆಯ ನಾನಾ ವಿಭಾಗಗಳ ಪ್ರಶಸ್ತಿಗಳು ಐದು ವರ್ಷಗಳಿಂದ ಬಾಕಿ ಇದ್ದವು. ನಮ್ಮ ಅವಧಿಯಲ್ಲಿ ಎಲ್ಲವನ್ನೂ ವಿತರಿಸುವ ಕೆಲಸ ಮಾಡಿದ್ದೇವೆ ಎಂದರು.

ಪತ್ರಕರ್ತ ಕುಟುಂಬಗಳ ಆರೋಗ್ಯ, ಆರೋಗ್ಯ ವಿಮೆ, ಉಚಿತ ಬಸ್ ಪಾಸ್, ನಿವೃತ್ತಿ ವೇತನ ಹೆಚ್ಚಳ ಸೇರಿದಂತೆ ಹತ್ತಾರು ವರ್ಷಗಳಿಂದ ಬಾಕಿ ಇದ್ದ ನಮ್ಮ ಸಮುದಾಯದ ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತಿದ್ದೇವೆ ಎಂದು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago