ರಾಜ್ಯ

ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ: ಕೆ.ವಿ.ಪ್ರಭಾಕರ್

ಚಿತ್ರದುರ್ಗ : ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು.

ನ್ಯೂಸ್ ರೂಮಲ್ಲಿ ಲೇಔಟ್ ಆಗಿ, ಪ್ರಿಂಟಿಂಗ್ ಪ್ರೆಸ್ ನಲ್ಲಿ ಮುದ್ರಣವಾಗುವ ಪತ್ರಿಕೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿರುವ ಓದುಗರ ಮನೆ ಬಾಗಿಲಿಗೆ ತಲುಪಿಸಲು ಪತ್ರಿಕಾ ವಿರತಕರ ನರ ಮಂಡಲ ವ್ಯವಸ್ಥಿತವಾಗಿರಬೇಕು. ನ್ಯೂಸ್ ರೂಮುಗಳು ಎಷ್ಟೇ ಹೈಟೆಕ್ ಆಗಿದ್ದರೂ, ಪ್ರಿಂಟಿಂಗ್ ಪ್ರೆಸ್ ಗಳು ಎಷ್ಟೇ ಅಡ್ವಾನ್ಸ್ ಆಗಿದ್ದರೂ ಪತ್ರಿಕಾ ವಿತರಕರ ನರಮಂಡಲ ಸರಿಯಾಗಿ ಇಲ್ಲ ಅಂದರೆ ಪ್ರಯೋಜನವಿಲ್ಲ ಎಂದು ವಿಶ್ಲೇಷಿಸಿದರು.

ಪತ್ರಿಕಾ ವಿತರಕರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನಲೆಯುಳ್ಳವರಾಗಿದ್ದು, ವಿದ್ಯಾರ್ಥಿಗಳಿಂದ ವಯಸ್ಕರವರೆಗೂ ಪ್ರತಿನಿತ್ಯ ಸೂರ್ಯ ಉದಯಿಸುವ ಮೊದಲೇ ಚಳಿ, ಮಳೆ ಎನ್ನದೆ ಪತ್ರಿಕೆಯನ್ನು ಮನೆ ಮನೆ ತಲುಪಿಸುತ್ತಾರೆ.

ಪತ್ರಿಕೆ ವಿತರಕ ವಿದ್ಯಾರ್ಥಿಗಳು ಓದಿನ ಜೊತೆಗೆ ದುಡಿಮೆಯಲ್ಲೂ ತೊಡಗುತ್ತಾರೆ. ಇದು ಅವರ ಕುಟುಂಬಕ್ಕೆ ಮತ್ತು ನಾಡಿನ ಆರ್ಥಿಕತೆಗೂ ಅವರ ಪಾಲಿನ ಕೊಡುಗೆ ಕೊಟ್ಟಂತೆ ಎಂದರು.

ಪತ್ರಿಕೆ ವಿತರಕರ ಸಮಗ್ರ ಕಲ್ಯಾಣಕ್ಕೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡಬೇಕು. ಉಚಿತ ಪಡಿತರ, ವಿದ್ಯಾರ್ಥಿ ವೇತನ ನೀಡಬೇಕು. ಜೀವವಿಮೆ, ಹೆಲ್ತ್ ಕಾರ್ಡ್ ನೀಡಬೇಕು. ಬೈಕ್/ ಸೈಕಲ್ ಖರೀದಿಸಲು ಶೇ.50 ರಷ್ಟು ರಿಯಾಯ್ತಿ ಒದಗಿಸಬೇಕು, ಜರ್ಕೀನ್ ಗಳನ್ನು ಒದಗಿಸಬೇಕು. ಜೀವ ವಿಮೆ ಮಾಡಿಸಿಕೊಡಬೇಕು ಎನ್ನುವ ಬಹು ವರ್ಷಗಳ ಬೇಡಿಕೆಗಳಿವೆ.

ಎಲ್ಲವನ್ನೂ ಸರ್ಕಾರವೇ ನೇರವಾಗಿ ಒದಗಿಸುವುದು ಕಷ್ಟ.

ಹೀಗಾಗಿ ನಾನು ಕೊಡುವ ಸಲಹೆ ಅಂದರೆ…

ಮಾಧ್ಯಮ‌ ಸಂಸ್ಥೆಗಳು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR fund ಬಳಸಿಕೊಂಡು ಈ ಬೇಡಿಕೆಗಳಲ್ಲಿ ಬಹಳಷ್ಟನ್ನು ಈಡೇರಿಸಬಹುದು.

ನಾನೂ ಕೂಡ ಮಾಧ್ಯಮ ಸಂಸ್ಥೆಗಳು, ಸರ್ಕಾರ ಮತ್ತು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR Fund ನೆರವಿನಿಂದ ಏನೆಲ್ಲಾ ಮಾಡಬಹುದು ಎನ್ನುವ ಬಗ್ಗೆ plan ಮಾಡುತ್ತಿದ್ದೇನೆ.
ಮುಂದಿನ ದಿನಗಳಲ್ಲಿ ಇವೆಲ್ಲಾ ಸಾಕಾರಗೊಳ್ಳಬಹುದು ಎನ್ನುವ ನಿರೀಕ್ಷೆ ಇದೆ ಎನ್ನುವ ಮಾತುಗಳನ್ನಾಡಿದರು.

ತರಳಬಾಳು ಶ್ರೀಗಳಾಗದ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಆರ್ ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ ಸಂಕೇಶ್ವರರು ಸೇರಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

13 hours ago