ರಾಜ್ಯ

ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ: ಕೆ.ವಿ.ಪ್ರಭಾಕರ್

ಚಿತ್ರದುರ್ಗ : ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು.

ನ್ಯೂಸ್ ರೂಮಲ್ಲಿ ಲೇಔಟ್ ಆಗಿ, ಪ್ರಿಂಟಿಂಗ್ ಪ್ರೆಸ್ ನಲ್ಲಿ ಮುದ್ರಣವಾಗುವ ಪತ್ರಿಕೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿರುವ ಓದುಗರ ಮನೆ ಬಾಗಿಲಿಗೆ ತಲುಪಿಸಲು ಪತ್ರಿಕಾ ವಿರತಕರ ನರ ಮಂಡಲ ವ್ಯವಸ್ಥಿತವಾಗಿರಬೇಕು. ನ್ಯೂಸ್ ರೂಮುಗಳು ಎಷ್ಟೇ ಹೈಟೆಕ್ ಆಗಿದ್ದರೂ, ಪ್ರಿಂಟಿಂಗ್ ಪ್ರೆಸ್ ಗಳು ಎಷ್ಟೇ ಅಡ್ವಾನ್ಸ್ ಆಗಿದ್ದರೂ ಪತ್ರಿಕಾ ವಿತರಕರ ನರಮಂಡಲ ಸರಿಯಾಗಿ ಇಲ್ಲ ಅಂದರೆ ಪ್ರಯೋಜನವಿಲ್ಲ ಎಂದು ವಿಶ್ಲೇಷಿಸಿದರು.

ಪತ್ರಿಕಾ ವಿತರಕರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನಲೆಯುಳ್ಳವರಾಗಿದ್ದು, ವಿದ್ಯಾರ್ಥಿಗಳಿಂದ ವಯಸ್ಕರವರೆಗೂ ಪ್ರತಿನಿತ್ಯ ಸೂರ್ಯ ಉದಯಿಸುವ ಮೊದಲೇ ಚಳಿ, ಮಳೆ ಎನ್ನದೆ ಪತ್ರಿಕೆಯನ್ನು ಮನೆ ಮನೆ ತಲುಪಿಸುತ್ತಾರೆ.

ಪತ್ರಿಕೆ ವಿತರಕ ವಿದ್ಯಾರ್ಥಿಗಳು ಓದಿನ ಜೊತೆಗೆ ದುಡಿಮೆಯಲ್ಲೂ ತೊಡಗುತ್ತಾರೆ. ಇದು ಅವರ ಕುಟುಂಬಕ್ಕೆ ಮತ್ತು ನಾಡಿನ ಆರ್ಥಿಕತೆಗೂ ಅವರ ಪಾಲಿನ ಕೊಡುಗೆ ಕೊಟ್ಟಂತೆ ಎಂದರು.

ಪತ್ರಿಕೆ ವಿತರಕರ ಸಮಗ್ರ ಕಲ್ಯಾಣಕ್ಕೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡಬೇಕು. ಉಚಿತ ಪಡಿತರ, ವಿದ್ಯಾರ್ಥಿ ವೇತನ ನೀಡಬೇಕು. ಜೀವವಿಮೆ, ಹೆಲ್ತ್ ಕಾರ್ಡ್ ನೀಡಬೇಕು. ಬೈಕ್/ ಸೈಕಲ್ ಖರೀದಿಸಲು ಶೇ.50 ರಷ್ಟು ರಿಯಾಯ್ತಿ ಒದಗಿಸಬೇಕು, ಜರ್ಕೀನ್ ಗಳನ್ನು ಒದಗಿಸಬೇಕು. ಜೀವ ವಿಮೆ ಮಾಡಿಸಿಕೊಡಬೇಕು ಎನ್ನುವ ಬಹು ವರ್ಷಗಳ ಬೇಡಿಕೆಗಳಿವೆ.

ಎಲ್ಲವನ್ನೂ ಸರ್ಕಾರವೇ ನೇರವಾಗಿ ಒದಗಿಸುವುದು ಕಷ್ಟ.

ಹೀಗಾಗಿ ನಾನು ಕೊಡುವ ಸಲಹೆ ಅಂದರೆ…

ಮಾಧ್ಯಮ‌ ಸಂಸ್ಥೆಗಳು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR fund ಬಳಸಿಕೊಂಡು ಈ ಬೇಡಿಕೆಗಳಲ್ಲಿ ಬಹಳಷ್ಟನ್ನು ಈಡೇರಿಸಬಹುದು.

ನಾನೂ ಕೂಡ ಮಾಧ್ಯಮ ಸಂಸ್ಥೆಗಳು, ಸರ್ಕಾರ ಮತ್ತು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR Fund ನೆರವಿನಿಂದ ಏನೆಲ್ಲಾ ಮಾಡಬಹುದು ಎನ್ನುವ ಬಗ್ಗೆ plan ಮಾಡುತ್ತಿದ್ದೇನೆ.
ಮುಂದಿನ ದಿನಗಳಲ್ಲಿ ಇವೆಲ್ಲಾ ಸಾಕಾರಗೊಳ್ಳಬಹುದು ಎನ್ನುವ ನಿರೀಕ್ಷೆ ಇದೆ ಎನ್ನುವ ಮಾತುಗಳನ್ನಾಡಿದರು.

ತರಳಬಾಳು ಶ್ರೀಗಳಾಗದ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಆರ್ ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ ಸಂಕೇಶ್ವರರು ಸೇರಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago