ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಿಪಿ ಯೋಗೇಶ್ವರ್ಗೆ ಜೆಡಿಎಸ್ ಟಿಕೆಟ್ ನೀಡಿ ಎಂದು ಸಲಹೆ ನೀಡಿದ್ದರು ಎಂಬ ವಿಷಯವನ್ನು ಹೊರಹಾಕಿದ್ದಾರೆ.
ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಯೋಗೇಶ್ವರ್ ಅವರಿಗೆ ರಾಜೀನಾಮೆ ಕೊಟ್ಟು ಜೆಡಿಎಸ್ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಹೇಳುತ್ತಾ ಕಿಡಿಕಾರಿದರು ಎಚ್ ಡಿ ಕುಮಾರಸ್ವಾಮಿ.
ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ, ಇನ್ನು ಮೂರು ದಿನ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.
ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…