ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಸದೀಯ ರಾಜ್ಯ ಭಾಷಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮ ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಒಂದು ಬ್ಯಾನರ್ ಮಾತ್ರ ಕಿತ್ತು ಹಾಕಿದ್ದಾರೆ. ಸುಳ್ಳು ಆರೋಪ ಹೊರಿಸಿ 41 ಜನ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವನ್ನು ಸರ್ಕಾರ ಮಾಡಿದೆ.
ಇದನ್ನೂ ಓದಿ:-ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಹೋಟೆಲ್ವೊಂದರಲ್ಲಿ ಕೇಂದ್ರ ಸರ್ಕಾರದ ರಾಜ್ಯ ಭಾಷಾ ಸಮಿತಿ ಮೂರು ದಿನದ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆರು ಜನ ಸಂಸದರು ಭಾಗಿಯಾಗಿದ್ದರು. ನಾವು ಹೋಗಿ ಕಾರ್ಯಕ್ರಮದ ಬ್ಯಾನರ್ ಹರಿದುಹಾಕಿದ್ದು ನಿಜ. ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 76 ಲಕ್ಷ ಕಾರ್ಯಕರ್ತರಿದ್ದಾರೆ. ಎಲ್ಲರನ್ನೂ ಜೈಲಿಗೆ ಕಳುಹಿಸಲು ಸಾದ್ಯವೇ? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ತಮಿಳುನಾಡಿನ ಸಂಸದರು ಹಿಂದಿ ಹೇರಿಕೆ ಬಗ್ಗೆ ಪ್ರತಿಭಟಿಸುತ್ತಾರೆ. ಆದರೆ ನಮ್ಮ ಸಂಸದರು ಯಾವುದೇ ಪ್ರತಿಭಟನೆ ಮಾಡುವುದಿಲ್ಲ. ಕೂಡಲೇ ನಮ್ಮ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಹಿಂದಿ ಹೇರಿಕೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…