Baduku – Centre for Livelihoods Learning
ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) ಕೋರ್ಸ್ ತರಬೇತಿ ನಡೆಯಲಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್ಶಿಪ್ ನಿಡಲಾಗುತ್ತದೆ.
ಕೋರ್ಸ್ನಲ್ಲಿ ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ. ಮೊಬೈಲ್ ಜರ್ನಲಿಸಮ್, ವೆಬ್ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್ಲೈನ್ ಜರ್ನಲಿಸಮ್ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ನಲ್ಲಿ ಕಲಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನಾಂಕ. ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬುಹುದು.
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…