Baduku – Centre for Livelihoods Learning
ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) ಕೋರ್ಸ್ ತರಬೇತಿ ನಡೆಯಲಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್ಶಿಪ್ ನಿಡಲಾಗುತ್ತದೆ.
ಕೋರ್ಸ್ನಲ್ಲಿ ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ. ಮೊಬೈಲ್ ಜರ್ನಲಿಸಮ್, ವೆಬ್ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್ಲೈನ್ ಜರ್ನಲಿಸಮ್ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ನಲ್ಲಿ ಕಲಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನಾಂಕ. ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬುಹುದು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…