ರಾಜ್ಯ

ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ : ಜು.31 ಕೊನೆ ದಿನ

ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) ಕೋರ್ಸ್ ತರಬೇತಿ ನಡೆಯಲಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್‌ಶಿಪ್ ನಿಡಲಾಗುತ್ತದೆ.

ಕೋರ್ಸ್‌ನಲ್ಲಿ ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ. ಮೊಬೈಲ್ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್‌ನಲ್ಲಿ ಕಲಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನಾಂಕ. ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬುಹುದು.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

16 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago