ರಾಜ್ಯ

ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ : ಜು.31 ಕೊನೆ ದಿನ

ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) ಕೋರ್ಸ್ ತರಬೇತಿ ನಡೆಯಲಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್‌ಶಿಪ್ ನಿಡಲಾಗುತ್ತದೆ.

ಕೋರ್ಸ್‌ನಲ್ಲಿ ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ. ಮೊಬೈಲ್ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್‌ನಲ್ಲಿ ಕಲಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನಾಂಕ. ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬುಹುದು.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

8 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

9 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago