ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ.
ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇದರಿಂದ ಕೆರಳಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯರಂತಹ ನೂರು ಜನ ಬಂದರೂ ನನ್ನನ್ನು ಅರೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಈ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯನ್ನು ಬಂಧಿಸಲು ನೂರು ಸಿದ್ದರಾಮಯ್ಯ ಅಲ್ಲ ಒಬ್ಬ ಕಾನ್ಸ್ಟೇಬಲ್ ಸಾಕು. ಅರೆಸ್ಟ್ ಮಾಡಿಸುವ ಕೆಲಸ ನನ್ನದಲ್ಲ ಪೊಲೀಸರದ್ದು ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಕೂಡ ಬಂಧನದ ಭೀತಿ ಎದುರಾಗಲಿದೆ ಎನ್ನಲಾಗಿದ್ದು, ರಾಜ್ಯಪಾಲರು ಪ್ರಸಿಕ್ಯೂಷನ್ಗೆ ಅನುಮತಿ ನೀಡಿದರಷ್ಟೇ ಮುಂದಿನ ಬೆಳವಣಿಗೆ ಹೇಗಾಗಲಿದೆ ಎಂಬುದು ತಿಳಿಯಲಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…