ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ.
ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇದರಿಂದ ಕೆರಳಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯರಂತಹ ನೂರು ಜನ ಬಂದರೂ ನನ್ನನ್ನು ಅರೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಈ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯನ್ನು ಬಂಧಿಸಲು ನೂರು ಸಿದ್ದರಾಮಯ್ಯ ಅಲ್ಲ ಒಬ್ಬ ಕಾನ್ಸ್ಟೇಬಲ್ ಸಾಕು. ಅರೆಸ್ಟ್ ಮಾಡಿಸುವ ಕೆಲಸ ನನ್ನದಲ್ಲ ಪೊಲೀಸರದ್ದು ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಕೂಡ ಬಂಧನದ ಭೀತಿ ಎದುರಾಗಲಿದೆ ಎನ್ನಲಾಗಿದ್ದು, ರಾಜ್ಯಪಾಲರು ಪ್ರಸಿಕ್ಯೂಷನ್ಗೆ ಅನುಮತಿ ನೀಡಿದರಷ್ಟೇ ಮುಂದಿನ ಬೆಳವಣಿಗೆ ಹೇಗಾಗಲಿದೆ ಎಂಬುದು ತಿಳಿಯಲಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…