ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಪಡಿತರ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾಗಿದ್ದು, ಅದರಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಕಾರಣ ಅವುಗಳನ್ನು ತಡೆಹಿಡಿಯಲಾಗಿದೆ. ಅರ್ಹರ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ರದ್ದಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದತ್ತಾಂಸ ಸಂಗ್ರಹಿಸಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು ಶೇ.65% ರಿಂದ 75%ರಷ್ಟು ಜನಸಂಖ್ಯೆಗೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ಪರಿಷ್ಕರಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರಿಗೆ ಬಿಪಿಎಲ್ ಕಾರ್ಡ್ಅನ್ನು ನೀಡಲಾಗುವುದು ಎಂದು ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…