ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಪಡಿತರ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾಗಿದ್ದು, ಅದರಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಕಾರಣ ಅವುಗಳನ್ನು ತಡೆಹಿಡಿಯಲಾಗಿದೆ. ಅರ್ಹರ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ರದ್ದಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದತ್ತಾಂಸ ಸಂಗ್ರಹಿಸಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು ಶೇ.65% ರಿಂದ 75%ರಷ್ಟು ಜನಸಂಖ್ಯೆಗೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ಪರಿಷ್ಕರಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರಿಗೆ ಬಿಪಿಎಲ್ ಕಾರ್ಡ್ಅನ್ನು ನೀಡಲಾಗುವುದು ಎಂದು ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…