ರಾಜ್ಯ

ಹೈಕಮಾಂಡ್‌ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ: ಕೆ.ಎಚ್.ಮುನಿಯಪ್ಪ

ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್‌ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್‌ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ಸಮಾವೇಶ ಮಾಡುವ ಬಗ್ಗೆ ಸಚಿವರಾದ ಕೆ.ಎನ್‌.ರಾಜಣ್ಣ, ಡಾ.ಜಿ.ಪರಮೇಶ್ವರ್‌ ಸೇರಿದಂತೆ ಅನೇಕರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್‌ಸಿ-ಎಸ್‌ಟಿ ಸಮಾವೇಶ ಯಶಸ್ವಿಯಾಗಿದ್ದು, ನಮ್ಮ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿತ್ತು ಎಂದು ಹೇಳಿದರು.

ನಮ್ಮ ಪಕ್ಷದ ಹೈಕಮಾಂಡ್‌ ನಾಯಕರೇ ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕೆಂದು ಹೇಳಿದ್ದರು. ಅಂತೆಯೇ ಮುಂದಿನ ದಿನಗಳಲ್ಲಿ ಸಮಾವೇಶದ ಬಗ್ಗೆ ಹೈಕಮಾಂಡ್‌ ನಿರ್ಧರಿಸಲಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago