ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ಗೆ ಸಮಾವೇಶ ಮಾಡುವ ಬಗ್ಗೆ ಸಚಿವರಾದ ಕೆ.ಎನ್.ರಾಜಣ್ಣ, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್ಸಿ-ಎಸ್ಟಿ ಸಮಾವೇಶ ಯಶಸ್ವಿಯಾಗಿದ್ದು, ನಮ್ಮ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿತ್ತು ಎಂದು ಹೇಳಿದರು.
ನಮ್ಮ ಪಕ್ಷದ ಹೈಕಮಾಂಡ್ ನಾಯಕರೇ ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕೆಂದು ಹೇಳಿದ್ದರು. ಅಂತೆಯೇ ಮುಂದಿನ ದಿನಗಳಲ್ಲಿ ಸಮಾವೇಶದ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…