ಬೆಂಗಳೂರು: ರಾಜ್ಯದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿರಬಹುದು. ಆದರೆ ಅಕ್ಕಿಗೆ ಕೊರತೆ ಇಲ್ಲ, ಎಲ್ಲೋ ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.17) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಕೊನೆಯವರೆಗೂ ಅಕ್ಕಿಯನ್ನು ವಿತರಣೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಕ್ಕಿಯನ್ನು ಎಲ್ಲಾ ಕಡೆಗಳಿಗೂ ಪೂರೈಕೆ ಮಾಡಲಾಗಿದ್ದು, ಯಾವುದೇ ಕೊರತೆ ಇಲ್ಲ. ಆದರೆ ಸಾಗಾಣಿಕೆಯಲ್ಲಿ ಸ್ವಲ್ಪ ವ್ಯತ್ಯಾಸ ಆಗಿರಬಹುದು ಅಷ್ಟೇ. ಪೂರೈಕೆ ಆಗುವಷ್ಟು ಅಕ್ಕಿ ಖರೀದಿ ಮಾಡಿ ದಾಸ್ತಾನುನಲ್ಲೀಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಎರಡು ತಿಂಗಳ ಅಕ್ಕಿಯನ್ನು ಒಂದೇ ತಿಂಗಳು ನೀಡಬೇಕಾಗಿರುವುದರಿಂದ ಕೆಲ ಕಡೆ ಸಮಸ್ಯೆ ಆಗಿರಬಹುದು. ತೊಂದರೆಯಾಗಿರುವ ನ್ಯಾಯಬೆಲೆಗಳನ್ನು ಗುರುತಿಸಿ ಪರಿಹರಿಸಲಾಗುವುದು ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ದಾರರು ಅಕ್ಕಿ ತೆಗೆದುಕೊಂಡು ಮಾರಿದರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಕೊಡುವ ಅಕ್ಕಿಯನ್ನು ತೆಗೆದುಕೊಂಡು ಯಾವುದೇ ಬಿಪಿಎಲ್ ಕಾರ್ಡ್ದಾರರು ಮಾರಾಟ ಮಾಡಿದರೆ ಅಂತಹವರ ವಿರುದ್ಧ ವಿಚಾರಣೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…