ರಾಜ್ಯ

ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್‌ ಬೋರ್ಡ್‌| ಅಕ್ಕಿ ಕೊರತೆಯಿಲ್ಲ, ಸರಬರಾಜು ಸಮಸ್ಯೆ ಆಗಿರಬಹುದು: ಕೆ.ಎಚ್‌.ಮುನಿಯಪ್ಪ

ಬೆಂಗಳೂರು: ರಾಜ್ಯದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್‌ ಬೋರ್ಡ್‌ ಹಾಕಿರಬಹುದು. ಆದರೆ ಅಕ್ಕಿಗೆ ಕೊರತೆ ಇಲ್ಲ, ಎಲ್ಲೋ ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌17) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಕೊನೆಯವರೆಗೂ ಅಕ್ಕಿಯನ್ನು ವಿತರಣೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಕ್ಕಿಯನ್ನು ಎಲ್ಲಾ ಕಡೆಗಳಿಗೂ ಪೂರೈಕೆ ಮಾಡಲಾಗಿದ್ದು, ಯಾವುದೇ ಕೊರತೆ ಇಲ್ಲ. ಆದರೆ ಸಾಗಾಣಿಕೆಯಲ್ಲಿ ಸ್ವಲ್ಪ ವ್ಯತ್ಯಾಸ ಆಗಿರಬಹುದು ಅಷ್ಟೇ. ಪೂರೈಕೆ ಆಗುವಷ್ಟು ಅಕ್ಕಿ ಖರೀದಿ ಮಾಡಿ ದಾಸ್ತಾನುನಲ್ಲೀಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಎರಡು ತಿಂಗಳ ಅಕ್ಕಿಯನ್ನು ಒಂದೇ ತಿಂಗಳು ನೀಡಬೇಕಾಗಿರುವುದರಿಂದ ಕೆಲ ಕಡೆ ಸಮಸ್ಯೆ ಆಗಿರಬಹುದು. ತೊಂದರೆಯಾಗಿರುವ ನ್ಯಾಯಬೆಲೆಗಳನ್ನು ಗುರುತಿಸಿ ಪರಿಹರಿಸಲಾಗುವುದು ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ದಾರರು ಅಕ್ಕಿ ತೆಗೆದುಕೊಂಡು ಮಾರಿದರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಕೊಡುವ ಅಕ್ಕಿಯನ್ನು ತೆಗೆದುಕೊಂಡು ಯಾವುದೇ ಬಿಪಿಎಲ್‌ ಕಾರ್ಡ್‌ದಾರರು ಮಾರಾಟ ಮಾಡಿದರೆ ಅಂತಹವರ ವಿರುದ್ಧ ವಿಚಾರಣೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago