ರಾಜ್ಯ

ಸರ್ಕಾರದಿಂದ ರೈತರಿಗೆ 7 ಗಂಟೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ: ಕೆ.ಜೆ.ಜಾರ್ಜ್‌

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.‌17) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್‌ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನಮ್ಮ ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದೆ. ಕರ್ನಾಟಕಕ್ಕೆ ಸದ್ಯ 19 ಸಾವಿ ಮೆಗಾ ವ್ಯಾಟ್‌ ವಿದ್ಯುತ್‌ನ ಬೇಡಿಕೆ ಇದೆ. ಹೀಗಿದ್ದರೂ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಆಗುತ್ತಿದೆ. ಹಾಗಾಗಿ 7 ಗಂಟೆಗಳ ಕಾಲ ವಿದ್ಯುತ್‌ ಅನ್ನು ನಿರಂತರವಾಗಿ ಕೊಡದೆ ಹೋದರೂ ಒಂದು ಬಾರಿ 4 ಗಂಟೆ ಹಾಗೂ ಮತ್ತೊಂದು 3 ಗಂಟೆಯಂತೆ ರೈತರಿಗೆ ವಿದ್ಯುತ್‌ ನೀಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ವಿದ್ಯುತ್‌ ಬೇಡಿಕೆ ಹಿನ್ನೆಲೆಯಲ್ಲಿ ಈ ಬಾರಿ 56 ಸಬ್‌ ಸ್ಟೇಷನ್‌ಗಳನ್ನು ಆರಂಭಿಸಿದ್ದು, ಮುಂಬರುವ ವರ್ಷಕ್ಕೆ 100 ಸಬ್‌ ಸ್ಟೇಷನ್‌ಗಳನ್ನು ಪ್ರಾರಂಭ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಕಲಬುರಗಿ ಭಾಗದಲ್ಲಿ ಬೆಳಿಗ್ಗಿನ ಸಮಯ ವಿದ್ಯುತ್‌ ನೀಡಲು ನಮಗೆ ತೊಂದರೆ ಇಲ್ಲ. ಆದರೆ ಬೆಳಿಗ್ಗೆ ಮತ್ತು ಸಂಜೆ ನೀಡಲು ಸಮಸ್ಯೆ ಇದೆ. ಹೀಗಾಗಿ ಕರೆಂಟ್‌ ಪಂಪ್‌ ಸ್ಟೋರೇಜ್‌ ಮಾಡು ವ್ಯವಸ್ಥೆ ಮಾಡುತ್ತಿದ್ದೇವೆ. ಜೊತೆಗೆ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ ಸಹ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

 

ಅರ್ಚನ ಎಸ್‌ ಎಸ್

Recent Posts

ಗೋಣಿಕೊಪ್ಪ| ಲಾರಿ ಹಾಗೂ ಬೈಕ್‌ ನಡುವೆ ಅಪಘಾತ: ಸವಾರ ಸಾವು

ಗೋಣಿಕೊಪ್ಪ: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…

27 mins ago

ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ: ಸಚಿವ ಈಶ್ವರ್ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…

48 mins ago

ನಾನು ಸಿಎಂ ಕುರ್ಚಿ ರೇಸ್‌ನಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ…

2 hours ago

ತುಮಕೂರಿನಲ್ಲಿ 11 ಕೋತಿಗಳ ನಿಗೂಢ ಸಾವು: ವಿಷಪ್ರಾಶನದ ಶಂಕೆ

ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…

2 hours ago

ಮೈಸೂರು ವಿಮಾನ ನಿಲ್ದಾಣದ ಬಳಿ ಕಾಣಿಸಿಕೊಂಡ ಹುಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…

2 hours ago

ಗ್ರಾಹಕರಿಗೆ ಬಿಗ್‌ ಶಾಕ್:‌ ಶತಕದ ಸನಿಹಕ್ಕೆ ಟೊಮೊಟೊ ದರ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…

3 hours ago