ರಾಜ್ಯ

ಸರ್ಕಾರದಿಂದ ರೈತರಿಗೆ 7 ಗಂಟೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ: ಕೆ.ಜೆ.ಜಾರ್ಜ್‌

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.‌17) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್‌ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನಮ್ಮ ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದೆ. ಕರ್ನಾಟಕಕ್ಕೆ ಸದ್ಯ 19 ಸಾವಿ ಮೆಗಾ ವ್ಯಾಟ್‌ ವಿದ್ಯುತ್‌ನ ಬೇಡಿಕೆ ಇದೆ. ಹೀಗಿದ್ದರೂ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಆಗುತ್ತಿದೆ. ಹಾಗಾಗಿ 7 ಗಂಟೆಗಳ ಕಾಲ ವಿದ್ಯುತ್‌ ಅನ್ನು ನಿರಂತರವಾಗಿ ಕೊಡದೆ ಹೋದರೂ ಒಂದು ಬಾರಿ 4 ಗಂಟೆ ಹಾಗೂ ಮತ್ತೊಂದು 3 ಗಂಟೆಯಂತೆ ರೈತರಿಗೆ ವಿದ್ಯುತ್‌ ನೀಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ವಿದ್ಯುತ್‌ ಬೇಡಿಕೆ ಹಿನ್ನೆಲೆಯಲ್ಲಿ ಈ ಬಾರಿ 56 ಸಬ್‌ ಸ್ಟೇಷನ್‌ಗಳನ್ನು ಆರಂಭಿಸಿದ್ದು, ಮುಂಬರುವ ವರ್ಷಕ್ಕೆ 100 ಸಬ್‌ ಸ್ಟೇಷನ್‌ಗಳನ್ನು ಪ್ರಾರಂಭ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಕಲಬುರಗಿ ಭಾಗದಲ್ಲಿ ಬೆಳಿಗ್ಗಿನ ಸಮಯ ವಿದ್ಯುತ್‌ ನೀಡಲು ನಮಗೆ ತೊಂದರೆ ಇಲ್ಲ. ಆದರೆ ಬೆಳಿಗ್ಗೆ ಮತ್ತು ಸಂಜೆ ನೀಡಲು ಸಮಸ್ಯೆ ಇದೆ. ಹೀಗಾಗಿ ಕರೆಂಟ್‌ ಪಂಪ್‌ ಸ್ಟೋರೇಜ್‌ ಮಾಡು ವ್ಯವಸ್ಥೆ ಮಾಡುತ್ತಿದ್ದೇವೆ. ಜೊತೆಗೆ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ ಸಹ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

5 hours ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

5 hours ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

5 hours ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

5 hours ago

ಅಭಿವೃದ್ಧಿ ಹರಿಕಾರ ದುಗ್ಗಹಟ್ಟಿ ವೀರಭದ್ರ

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…

5 hours ago