ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಇಂದು(ಮಾರ್ಚ್.17) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಎಂಎಲ್ಸಿ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನಮ್ಮ ರಾಜ್ಯದಲ್ಲಿ ವಿದ್ಯುತ್ ಕೊರತೆ ಇದೆ. ಕರ್ನಾಟಕಕ್ಕೆ ಸದ್ಯ 19 ಸಾವಿ ಮೆಗಾ ವ್ಯಾಟ್ ವಿದ್ಯುತ್ನ ಬೇಡಿಕೆ ಇದೆ. ಹೀಗಿದ್ದರೂ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗುತ್ತಿದೆ. ಹಾಗಾಗಿ 7 ಗಂಟೆಗಳ ಕಾಲ ವಿದ್ಯುತ್ ಅನ್ನು ನಿರಂತರವಾಗಿ ಕೊಡದೆ ಹೋದರೂ ಒಂದು ಬಾರಿ 4 ಗಂಟೆ ಹಾಗೂ ಮತ್ತೊಂದು 3 ಗಂಟೆಯಂತೆ ರೈತರಿಗೆ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿದರು.
ಇನ್ನು ವಿದ್ಯುತ್ ಬೇಡಿಕೆ ಹಿನ್ನೆಲೆಯಲ್ಲಿ ಈ ಬಾರಿ 56 ಸಬ್ ಸ್ಟೇಷನ್ಗಳನ್ನು ಆರಂಭಿಸಿದ್ದು, ಮುಂಬರುವ ವರ್ಷಕ್ಕೆ 100 ಸಬ್ ಸ್ಟೇಷನ್ಗಳನ್ನು ಪ್ರಾರಂಭ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಕಲಬುರಗಿ ಭಾಗದಲ್ಲಿ ಬೆಳಿಗ್ಗಿನ ಸಮಯ ವಿದ್ಯುತ್ ನೀಡಲು ನಮಗೆ ತೊಂದರೆ ಇಲ್ಲ. ಆದರೆ ಬೆಳಿಗ್ಗೆ ಮತ್ತು ಸಂಜೆ ನೀಡಲು ಸಮಸ್ಯೆ ಇದೆ. ಹೀಗಾಗಿ ಕರೆಂಟ್ ಪಂಪ್ ಸ್ಟೋರೇಜ್ ಮಾಡು ವ್ಯವಸ್ಥೆ ಮಾಡುತ್ತಿದ್ದೇವೆ. ಜೊತೆಗೆ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಸಹ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…