ರಾಜ್ಯ

ಕೆ.ಎನ್‌ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದ ತೆಗೆದಿದ್ದು..!

ಬೆಂಗಳೂರು : ಲೋಕಸಭೆ ವಿಪಕ್ಷನಾಯಕ ರಾಹುಲ್​ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಸಚಿವ ಕೆಎನ್​ ರಾಜಣ್ಣ ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು. ಇದು ಕೆಎನ್​ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದ್ದು, ಶಾಸಕ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ.

ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ತಲುಪಿದೆ.

ಪತ್ರದಲ್ಲೇನಿದೆ?
ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದು ಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ ಎಂದು ಪತ್ರದಲ್ಲಿದೆ.

ಹೈಕಮಾಂಡ್​ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್​ ರಾಜಣ್ಣ ಅವರು ಸೋಮವಾರ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಕೆಎನ್​ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

4 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago