kn rajanna
ಮಾಗಡಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಮಂಪರು ಪರೀಕ್ಷೆ ಮಾಡಿದರೆ ಯಾರ ಜೊತೆಯಲ್ಲಿ ಮಾತುಕತೆಯಾಗಿದೆ ಎಂಬುವುದು ತಿಳಿದು ಬರಲಿದೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇಲ್ಲದೇ ಇದ್ದಿದ್ದರೆ ಇಷ್ಟೊತ್ತಿಗೆ ರಾಜಣ್ಣ ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಿದ್ದರು ಎಂದು ಹೇಳಿದರು.
ಕಾಂಗ್ರೆಸ್ನಿಂದ ರಾಜಣ್ಣ ಒಂದು ಕಾಲನ್ನು ಈಗಾಗಲೇ ಹೊರಗಿಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದರ ಹಿಂದೆ ಡಿ.ಕೆ.ಶಿವಕುಮಾರ್ ಅವರ ಪಾತ್ರ ಇಲ್ಲ. ಹೈಕಮಾಂಡ್ ನೇರವಾಗಿ ಕ್ರಮ ತೆಗೆದುಕೊಂಡಿದೆ ಎಂದರು.
ಸಚಿವರಾಗಿದ್ದಾಗ ರಾಜಣ್ಣ ಯಾವ ರೀತಿ ನಡೆದುಕೊಂಡಿದ್ದರು? ಅವರ ಮಾತು, ನಡವಳಿಕೆಗಳು ಹೇಗಿದ್ದವು ಎಂದು ಎಲ್ಲರೂ ನೋಡಿದ್ದಾರೆ. ಮಾತು ಮನೆ ಕೆಡಿಸಿತ್ತು. ತೂತು ಒಲೆ ಕೆಡಿಸಿತ್ತು ಎಂಬಂತೆ ರಾಜಣ್ಣ ಅಧಿಕಾರ ಕಳೆದುಕೊಂಡರು. ಇದಕ್ಕೆ ನಮ್ಮ ನಾಯಕರ ಮೇಲೆ ದೂಷಣೆ ಮಾಡುವುದು ಸರಿಯಲ್ಲ ಎಂದರು.
ರಾಜಣ್ಣ ಈಗಾಗಲೇ ಬಿಜೆಪಿಯ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ದೆಹಲಿ ಮಟ್ಟದಲ್ಲೂ ಚರ್ಚೆಗಳಾಗಿವೆ. ಮಂಪರು ಪರೀಕ್ಷೆಗೊಳಪಡಿಸಿದರೆ, ಯಾರ ಸಂಪರ್ಕದಲ್ಲಿದ್ದಾರೆ ಎಂದು ಗೊತ್ತಾಗಲಿದೆ ಎಂದರು.
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…