ರಾಜ್ಯ

ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ: ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ

ಮಾಗಡಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಮಂಪರು ಪರೀಕ್ಷೆ ಮಾಡಿದರೆ ಯಾರ ಜೊತೆಯಲ್ಲಿ ಮಾತುಕತೆಯಾಗಿದೆ ಎಂಬುವುದು ತಿಳಿದು ಬರಲಿದೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇಲ್ಲದೇ ಇದ್ದಿದ್ದರೆ ಇಷ್ಟೊತ್ತಿಗೆ ರಾಜಣ್ಣ ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಿದ್ದರು ಎಂದು ಹೇಳಿದರು.

ಕಾಂಗ್ರೆಸ್‍ನಿಂದ ರಾಜಣ್ಣ ಒಂದು ಕಾಲನ್ನು ಈಗಾಗಲೇ ಹೊರಗಿಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದರ ಹಿಂದೆ ಡಿ.ಕೆ.ಶಿವಕುಮಾರ್ ಅವರ ಪಾತ್ರ ಇಲ್ಲ. ಹೈಕಮಾಂಡ್ ನೇರವಾಗಿ ಕ್ರಮ ತೆಗೆದುಕೊಂಡಿದೆ ಎಂದರು.

ಸಚಿವರಾಗಿದ್ದಾಗ ರಾಜಣ್ಣ ಯಾವ ರೀತಿ ನಡೆದುಕೊಂಡಿದ್ದರು? ಅವರ ಮಾತು, ನಡವಳಿಕೆಗಳು ಹೇಗಿದ್ದವು ಎಂದು ಎಲ್ಲರೂ ನೋಡಿದ್ದಾರೆ. ಮಾತು ಮನೆ ಕೆಡಿಸಿತ್ತು. ತೂತು ಒಲೆ ಕೆಡಿಸಿತ್ತು ಎಂಬಂತೆ ರಾಜಣ್ಣ ಅಧಿಕಾರ ಕಳೆದುಕೊಂಡರು. ಇದಕ್ಕೆ ನಮ್ಮ ನಾಯಕರ ಮೇಲೆ ದೂಷಣೆ ಮಾಡುವುದು ಸರಿಯಲ್ಲ ಎಂದರು.

ರಾಜಣ್ಣ ಈಗಾಗಲೇ ಬಿಜೆಪಿಯ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ದೆಹಲಿ ಮಟ್ಟದಲ್ಲೂ ಚರ್ಚೆಗಳಾಗಿವೆ. ಮಂಪರು ಪರೀಕ್ಷೆಗೊಳಪಡಿಸಿದರೆ, ಯಾರ ಸಂಪರ್ಕದಲ್ಲಿದ್ದಾರೆ ಎಂದು ಗೊತ್ತಾಗಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

4 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

5 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

6 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

7 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

8 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

11 hours ago