ರಾಜ್ಯ

ಸದ್ಗುರು ಅವರೊಂದಿಗೆ ಡಿಕೆಶಿ ವೇದಿಕೆ ಹಂಚಿಕೆ| ಡಿಸಿಎಂ ಡಿಕೆಶಿ ಅವರೇ ಉತ್ತರಿಸಬೇಕು: ಕೆ.ಎನ್‌.ರಾಜಣ್ಣ

ಹಾಸನ: ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಶಿವರಾತ್ರಿಯಂದು ಕೊಯಮತ್ತೂರ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್‌ ಅವರೊಟ್ಟಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ವೇದಿಕೆ ಹಂಚಿಕೊಂಡಿರುವುದು ಎಷ್ಟು ಸರಿ ಅಥವಾ ತಪ್ಪು, ಅವರ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನಿಸುತ್ತದೆ ಎಂಬುದನ್ನು ಅವರೇ ಹೇಳಬೇಕು ಎಂದರು.

ಈ ಹಿಂದೆ ಸದ್ಗುರು ಅವರು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಯಾರು? ಅವರು ನನಗೆ ತಿಳಿದೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಅಂತಹವರೊಡನೆ ವೇದಿಕೆ ಹಂಚಿಕೆ ಮಾಡಿಕೊಳ್ಳುತ್ತಾರೆ ಅಂದರೆ, ಈ ಬಗ್ಗೆ ಅವರೇ ಉತ್ತರ ನೀಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago