ರಾಜ್ಯ

ಹನಿಟ್ರ್ಯಾಪ್‌ ರಹಸ್ಯ: ಗೃಹ ಸಚಿವರಿಗೆ 3 ಪುಟಗಳಲ್ಲಿ ದೂರು ನೀಡುವೆ: ಸಚಿವ ರಾಜಣ್ಣ

ತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ವಿಚಾರ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹನಿಟ್ರ್ಯಾಪ್‌ ರಹಸ್ಯವನ್ನು ಬಿಚ್ಚಿಟ್ಟು ಗೃಹ ಸಚಿವರಿಗೆ ಮೂರು ಪುಟಗಳಲ್ಲಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ ಯತ್ನದ ಬಗ್ಗೆ ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ. ನನ್ನನ್ನು ಟಾರ್ಗೆಟ್‌ ಮಾಡಿ ಎರಡೂ ಬಾರಿ ಹನಿಟ್ರ್ಯಾಪ್‌ ಮಾಡಲು ಪ್ರಯತ್ನ ನಡೆದಿತ್ತು ಎಂದರು.

ಯುವಕನೋರ್ವನಿಂದ ಈ ಘಟನೆ ನಡೆದಿದ್ದು, ಪ್ರತಿ ಬಾರಿಯೂ ಬೇರೆ, ಬೇರೆ ಯುವತಿಯರನ್ನು ಕರೆ ತರುತ್ತಿದ್ದ. ಆದರೆ ಹನಿಟ್ರ್ಯಾಪ್‌ ಮಾಡಲು ಎರಡೂ ಬಾರಿ ಯತ್ನಿಸಿದಾಗಲೂ ಆ ಯುವತಿಯರನ್ನು ಹೈಕೋರ್ಟ್‌ನ ವಕೀಲೆಯರೆಂದು ಪರಿಚಯಿಸಿದ್ದ ಎಂದು ಹೇಳಿದರು.

ಇನ್ನು ಆ ಯುವತಿಯರು ಮನೆಗೆ ಬಂದು ಹೋದ ಸಿಸಿಟಿವಿ ದೃಶ್ಯ ಇಲ್ಲ, ಅವರು ಬಂದ ಹೋದ ವಿಡಿಯೋ ಇಲ್ಲ. ಅಲ್ಲದೇ ಹನಿಟ್ರ್ಯಾಪ್‌ ಮಾಡುವ ದಾಖಲೆ ನನ್ನ ಬಳಿ ಇಲ್ಲ. ಆದರೆ ಹುಡಗಿರನ್ನು ಕರೆ ತರುತ್ತಿದ್ದ ಯುವಕ ಎರಡೂ ಬಾರಿಯೂ ಕೂಡ ವಕೀಲೆ ಎಂದಿದ್ದ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

27 mins ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

2 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

4 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

5 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

8 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

9 hours ago