ತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹನಿಟ್ರ್ಯಾಪ್ ರಹಸ್ಯವನ್ನು ಬಿಚ್ಚಿಟ್ಟು ಗೃಹ ಸಚಿವರಿಗೆ ಮೂರು ಪುಟಗಳಲ್ಲಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ಯತ್ನದ ಬಗ್ಗೆ ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ. ನನ್ನನ್ನು ಟಾರ್ಗೆಟ್ ಮಾಡಿ ಎರಡೂ ಬಾರಿ ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆದಿತ್ತು ಎಂದರು.
ಯುವಕನೋರ್ವನಿಂದ ಈ ಘಟನೆ ನಡೆದಿದ್ದು, ಪ್ರತಿ ಬಾರಿಯೂ ಬೇರೆ, ಬೇರೆ ಯುವತಿಯರನ್ನು ಕರೆ ತರುತ್ತಿದ್ದ. ಆದರೆ ಹನಿಟ್ರ್ಯಾಪ್ ಮಾಡಲು ಎರಡೂ ಬಾರಿ ಯತ್ನಿಸಿದಾಗಲೂ ಆ ಯುವತಿಯರನ್ನು ಹೈಕೋರ್ಟ್ನ ವಕೀಲೆಯರೆಂದು ಪರಿಚಯಿಸಿದ್ದ ಎಂದು ಹೇಳಿದರು.
ಇನ್ನು ಆ ಯುವತಿಯರು ಮನೆಗೆ ಬಂದು ಹೋದ ಸಿಸಿಟಿವಿ ದೃಶ್ಯ ಇಲ್ಲ, ಅವರು ಬಂದ ಹೋದ ವಿಡಿಯೋ ಇಲ್ಲ. ಅಲ್ಲದೇ ಹನಿಟ್ರ್ಯಾಪ್ ಮಾಡುವ ದಾಖಲೆ ನನ್ನ ಬಳಿ ಇಲ್ಲ. ಆದರೆ ಹುಡಗಿರನ್ನು ಕರೆ ತರುತ್ತಿದ್ದ ಯುವಕ ಎರಡೂ ಬಾರಿಯೂ ಕೂಡ ವಕೀಲೆ ಎಂದಿದ್ದ ಎಂದು ತಿಳಿಸಿದರು.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…