D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್. ಹೀಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ ರೀತಿ ಬೇಕಾದರೂ ಹೇಳಲಿ. ಆದರೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯಾರ ಜೊತೆಯೂ ಚರ್ಚೆ ಮಾಡಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಗುರಿಮಾಡಲಾಗುತ್ತಿದೆ ಎಂಬುದು ಸರಿಯಲ್ಲ. ಕೆ.ಎನ್.ರಾಜಣ್ಣ ಖುದ್ದು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಇಲ್ಲಿ ಮುಚ್ಚುಮರೆ ಅಗತ್ಯವಿಲ್ಲ ಎಂದರು.
ಬಿಜೆಪಿ ನಾಯಕರು ಧರ್ಮಸ್ಥಳ ಉಳಿಸಿ ಎಂದು ಯಾತ್ರೆ ನಡೆಸುತ್ತಿರುವುದು ರಾಜಕೀಯ ಕಾರಣಕ್ಕೆ. ಧರ್ಮಸ್ಥಳಕ್ಕೆ ತಮ್ಮದೇ ಆದ ಸ್ಥಾನಮಾನವಿದೆ. ಅಪಾರ ಭಕ್ತ ಸಮೂಹವಿದೆ. ಕಳೆದ ಎರಡು ತಿಂಗಳಿನಿಂದಲೂ ಇದರ ಚರ್ಚೆ ನಡೆಯುತ್ತಿದೆ ಎಂದರು.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…