Change in State Politics is Certain: Minister K.N. Rajanna
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುತ್ತಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳಾಗಲಿದೆ ಎಂದು ಹೇಳಿದ್ದು, ಈ ಹೇಳಿಕೆಗೆ ಭಾರೀ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.
ರಾಜಣ್ಣ ಅವರು ತಮ್ಮ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರನ್ನು ಬದಲಿಸಿದ್ದೇ ಆದರೆ, ಪಕ್ಷದಲ್ಲಿ ಅಸಮಾಧಾನ ಭುಗಿಲೇಳಲಿದೆ ಎಂಬ ಸಂದೇಶವನ್ನು ಹೈಕಮಾಂಡ್ಗೆ ರವಾನಿಸಿದ್ದಾರೆ.
ಅನೇಕ ಶಾಸಕರು ಇತ್ತೀಚೆಗೆ ತಮ್ಮ ಕುಂದುಕೊರತೆಗಳನ್ನು ಹೇಳಲು ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ. ಈ ನಡುವೆ ಸಿದ್ದು ಪಾಳಯದ ನಾಯಕರು ರಾಜ್ಯ ಉಸ್ತುವಾರಿ ಹುದ್ದೆಯಲ್ಲಿರುವ ಸುರ್ಜೇವಾಲಾ ಅವರನ್ನು ಬದಲಾಯಿಸುವಂತೆ ಹೈಕಮಾಂಡ್ನ್ನು ಒತ್ತಾಯಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಆದರೆ, ರಾಹುಲ್ ಗಾಂಧಿಯವರು ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಎಸ್ಇಎಸ್-2015) ವಿಚಾರದಲ್ಲಿ ಸಿದ್ದರಾಮಯ್ಯ ಕಾರ್ಯಕ್ಷಮತೆಯ ಬಗ್ಗೆ ಅಸಮಾಧಾನಗೊಂಡಿದ್ದು, ಹೀಗಾಗಿಯೇ ಹೊಸ ಸಮೀಕ್ಷೆ ಕುರಿತ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…