Change in State Politics is Certain: Minister K.N. Rajanna
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುತ್ತಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳಾಗಲಿದೆ ಎಂದು ಹೇಳಿದ್ದು, ಈ ಹೇಳಿಕೆಗೆ ಭಾರೀ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.
ರಾಜಣ್ಣ ಅವರು ತಮ್ಮ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರನ್ನು ಬದಲಿಸಿದ್ದೇ ಆದರೆ, ಪಕ್ಷದಲ್ಲಿ ಅಸಮಾಧಾನ ಭುಗಿಲೇಳಲಿದೆ ಎಂಬ ಸಂದೇಶವನ್ನು ಹೈಕಮಾಂಡ್ಗೆ ರವಾನಿಸಿದ್ದಾರೆ.
ಅನೇಕ ಶಾಸಕರು ಇತ್ತೀಚೆಗೆ ತಮ್ಮ ಕುಂದುಕೊರತೆಗಳನ್ನು ಹೇಳಲು ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ. ಈ ನಡುವೆ ಸಿದ್ದು ಪಾಳಯದ ನಾಯಕರು ರಾಜ್ಯ ಉಸ್ತುವಾರಿ ಹುದ್ದೆಯಲ್ಲಿರುವ ಸುರ್ಜೇವಾಲಾ ಅವರನ್ನು ಬದಲಾಯಿಸುವಂತೆ ಹೈಕಮಾಂಡ್ನ್ನು ಒತ್ತಾಯಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಆದರೆ, ರಾಹುಲ್ ಗಾಂಧಿಯವರು ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಎಸ್ಇಎಸ್-2015) ವಿಚಾರದಲ್ಲಿ ಸಿದ್ದರಾಮಯ್ಯ ಕಾರ್ಯಕ್ಷಮತೆಯ ಬಗ್ಗೆ ಅಸಮಾಧಾನಗೊಂಡಿದ್ದು, ಹೀಗಾಗಿಯೇ ಹೊಸ ಸಮೀಕ್ಷೆ ಕುರಿತ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…