ರಾಜ್ಯ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಕೆ.ಎನ್.ರಾಜಣ್ಣ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುತ್ತಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳಾಗಲಿದೆ ಎಂದು ಹೇಳಿದ್ದು, ಈ ಹೇಳಿಕೆಗೆ ಭಾರೀ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.

ರಾಜಣ್ಣ ಅವರು ತಮ್ಮ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರನ್ನು ಬದಲಿಸಿದ್ದೇ ಆದರೆ, ಪಕ್ಷದಲ್ಲಿ ಅಸಮಾಧಾನ ಭುಗಿಲೇಳಲಿದೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಅನೇಕ ಶಾಸಕರು ಇತ್ತೀಚೆಗೆ ತಮ್ಮ ಕುಂದುಕೊರತೆಗಳನ್ನು ಹೇಳಲು ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ. ಈ ನಡುವೆ ಸಿದ್ದು ಪಾಳಯದ ನಾಯಕರು ರಾಜ್ಯ ಉಸ್ತುವಾರಿ ಹುದ್ದೆಯಲ್ಲಿರುವ ಸುರ್ಜೇವಾಲಾ ಅವರನ್ನು ಬದಲಾಯಿಸುವಂತೆ ಹೈಕಮಾಂಡ್‌ನ್ನು ಒತ್ತಾಯಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ, ರಾಹುಲ್ ಗಾಂಧಿಯವರು ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಎಸ್‍ಇಎಸ್-2015) ವಿಚಾರದಲ್ಲಿ ಸಿದ್ದರಾಮಯ್ಯ ಕಾರ್ಯಕ್ಷಮತೆಯ ಬಗ್ಗೆ ಅಸಮಾಧಾನಗೊಂಡಿದ್ದು, ಹೀಗಾಗಿಯೇ ಹೊಸ ಸಮೀಕ್ಷೆ ಕುರಿತ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

6 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

14 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

14 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

14 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

14 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

17 hours ago