ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವಇಗೂ ಬುದ್ಧಿ ಬರಲಿ. ಆದರೆ ಡಿ.ಕೆ.ಶಿವಕುಮಾರ್ ಅವರ ಹಿಂದುತ್ವದ ನಿಲುವು ನಾಟಕವೋ ಅಥವಾ ನಿಜವೋ ಎಂಬುದನ್ನು ದೇವರು ನಿರ್ಧಾರಿಸುತ್ತಾನೆ ಎಂದರು.
ಸ್ವಾತಂತ್ರ್ಯದ ಪೂರ್ವದ ಕಾಂಗ್ರೆಸ್ಸಿಗರು ಹೋರಾಟ ಮಾಡಿದ್ದೇ ಹಿಂದುತ್ವವನ್ನು ಮತ್ತೆ ವೈಭವೀಕರಿಸುವ ಉದ್ದೇಶದಿಂದಲೇ, ಹಾಗಾಗಿ ಹಳೇ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವ ಈಗಲೂ ಇದೆ. ಇಲ್ಲಿ ಎಲ್ಲರೂ ಧರ್ಮ ದ್ರೋಹಿಗಳಲ್ಲ, ಆದರೆ ಕೆಲವು ರಾಜಕೀಯ ನಾಯಕರು ಮತಬ್ಯಾಂಕ್ಗಾಗಿ ಮುಸಲ್ಮಾನರನ್ನು ಓಲೈಸುವ ನಿಟ್ಟಿನಲ್ಲಿ ನಾಟಕೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಇನ್ನು ಮಹಾತ್ಮಗಾಂಧೀಜಿ ಅವರು ಸಹ ಹಿಂದೂತ್ವ ಪ್ರತಿಪಾದಿಸಿದ್ದರು. ಅವರ ಸಮಾಧಿ ಮೇಲೆ ಹೇ ರಾಮ್ ಎಂದು ಬರೆಯಲಾಗಿದೆಯೇ ಹೊರತು, ಹೇ ಅಲ್ಲ ಅಥವಾ ಹೇ ಯೇಸು ಎಂದು ಬರೆದಿಲ್ಲ. ಅಂತೆಯೇ ಡಿಕೆಶ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಹಿಂದುತ್ವದ ಜಾಗೃತಿ ಉಂಟಾಗಿದೆ. ಹಿಂದೂತ್ವ ಬಿಜೆಪಿಯ ಸ್ವತ್ತೂ ಅಲ್ಲ, ಅದೂ ಸರ್ವ ಜನರ ಸುಖ ಬಯಸುವುದೇ ಹಿಂದುತ್ವ ಎಂದು ಹೇಳಿದರು.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…