ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದುತ್ವ ವಿಚಾರದಲ್ಲಿ ಮಾದರಿ: ಕೆ.ಎಸ್‌.ಈಶರಪ್ಪ

ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಮಾರ್ಚ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವಇಗೂ ಬುದ್ಧಿ ಬರಲಿ. ಆದರೆ ಡಿ.ಕೆ.ಶಿವಕುಮಾರ್‌ ಅವರ ಹಿಂದುತ್ವದ ನಿಲುವು ನಾಟಕವೋ ಅಥವಾ ನಿಜವೋ ಎಂಬುದನ್ನು ದೇವರು ನಿರ್ಧಾರಿಸುತ್ತಾನೆ ಎಂದರು.

ಸ್ವಾತಂತ್ರ್ಯದ ಪೂರ್ವದ ಕಾಂಗ್ರೆಸ್ಸಿಗರು ಹೋರಾಟ ಮಾಡಿದ್ದೇ ಹಿಂದುತ್ವವನ್ನು ಮತ್ತೆ ವೈಭವೀಕರಿಸುವ ಉದ್ದೇಶದಿಂದಲೇ, ಹಾಗಾಗಿ ಹಳೇ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವ ಈಗಲೂ ಇದೆ. ಇಲ್ಲಿ ಎಲ್ಲರೂ ಧರ್ಮ ದ್ರೋಹಿಗಳಲ್ಲ, ಆದರೆ ಕೆಲವು ರಾಜಕೀಯ ನಾಯಕರು ಮತಬ್ಯಾಂಕ್‌ಗಾಗಿ ಮುಸಲ್ಮಾನರನ್ನು ಓಲೈಸುವ ನಿಟ್ಟಿನಲ್ಲಿ ನಾಟಕೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು ಮಹಾತ್ಮಗಾಂಧೀಜಿ ಅವರು ಸಹ ಹಿಂದೂತ್ವ ಪ್ರತಿಪಾದಿಸಿದ್ದರು. ಅವರ ಸಮಾಧಿ ಮೇಲೆ ಹೇ ರಾಮ್‌ ಎಂದು ಬರೆಯಲಾಗಿದೆಯೇ ಹೊರತು, ಹೇ ಅಲ್ಲ ಅಥವಾ ಹೇ ಯೇಸು ಎಂದು ಬರೆದಿಲ್ಲ. ಅಂತೆಯೇ ಡಿಕೆಶ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಹಿಂದುತ್ವದ ಜಾಗೃತಿ ಉಂಟಾಗಿದೆ. ಹಿಂದೂತ್ವ ಬಿಜೆಪಿಯ ಸ್ವತ್ತೂ ಅಲ್ಲ, ಅದೂ ಸರ್ವ ಜನರ ಸುಖ ಬಯಸುವುದೇ ಹಿಂದುತ್ವ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

2 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

2 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

3 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

3 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

3 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

4 hours ago