ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದುತ್ವ ವಿಚಾರದಲ್ಲಿ ಮಾದರಿ: ಕೆ.ಎಸ್‌.ಈಶರಪ್ಪ

ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಮಾರ್ಚ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವಇಗೂ ಬುದ್ಧಿ ಬರಲಿ. ಆದರೆ ಡಿ.ಕೆ.ಶಿವಕುಮಾರ್‌ ಅವರ ಹಿಂದುತ್ವದ ನಿಲುವು ನಾಟಕವೋ ಅಥವಾ ನಿಜವೋ ಎಂಬುದನ್ನು ದೇವರು ನಿರ್ಧಾರಿಸುತ್ತಾನೆ ಎಂದರು.

ಸ್ವಾತಂತ್ರ್ಯದ ಪೂರ್ವದ ಕಾಂಗ್ರೆಸ್ಸಿಗರು ಹೋರಾಟ ಮಾಡಿದ್ದೇ ಹಿಂದುತ್ವವನ್ನು ಮತ್ತೆ ವೈಭವೀಕರಿಸುವ ಉದ್ದೇಶದಿಂದಲೇ, ಹಾಗಾಗಿ ಹಳೇ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವ ಈಗಲೂ ಇದೆ. ಇಲ್ಲಿ ಎಲ್ಲರೂ ಧರ್ಮ ದ್ರೋಹಿಗಳಲ್ಲ, ಆದರೆ ಕೆಲವು ರಾಜಕೀಯ ನಾಯಕರು ಮತಬ್ಯಾಂಕ್‌ಗಾಗಿ ಮುಸಲ್ಮಾನರನ್ನು ಓಲೈಸುವ ನಿಟ್ಟಿನಲ್ಲಿ ನಾಟಕೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು ಮಹಾತ್ಮಗಾಂಧೀಜಿ ಅವರು ಸಹ ಹಿಂದೂತ್ವ ಪ್ರತಿಪಾದಿಸಿದ್ದರು. ಅವರ ಸಮಾಧಿ ಮೇಲೆ ಹೇ ರಾಮ್‌ ಎಂದು ಬರೆಯಲಾಗಿದೆಯೇ ಹೊರತು, ಹೇ ಅಲ್ಲ ಅಥವಾ ಹೇ ಯೇಸು ಎಂದು ಬರೆದಿಲ್ಲ. ಅಂತೆಯೇ ಡಿಕೆಶ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಹಿಂದುತ್ವದ ಜಾಗೃತಿ ಉಂಟಾಗಿದೆ. ಹಿಂದೂತ್ವ ಬಿಜೆಪಿಯ ಸ್ವತ್ತೂ ಅಲ್ಲ, ಅದೂ ಸರ್ವ ಜನರ ಸುಖ ಬಯಸುವುದೇ ಹಿಂದುತ್ವ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago