ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌.ಈಶರಪ್ಪ ಕಿಡಿ

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ ನೀವು ಸಂಹಾರ ಆಗ್ತೀರಾ ಎಂದು     ಕೆ.ಎಸ್‌.ಈಶರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಕುಂಕುಮ ಹಚ್ಚಲು ಹೋದರೆ ಮೈಮೇಲೆ ದೆವ್ವ ಬಂದ ರೀತಿಯಲ್ಲಿ ಆಡುತ್ತಿದ್ದರು. ಆದರೆ, ಇದೀಗ ಅವರೇ ದೇವಾಲಯಗಳಿಗೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಅಕ್ಟೋಬರ್.18ಕ್ಕೆ ಮಂಡಿಸುತ್ತೇನೆ ಎಂದು ಹೇಳಿದ್ದರು. ಆದರೆ, ಇದೀಗ 18ಕ್ಕೆ ಆಗಲ್ಲ ಮುಂದೂಡುತ್ತೇನೆ ಎಂದಿದ್ದಾರೆ. ಅಲ್ಲದೇ, ಅಕ್ಟೋಬರ್‌.25ಕ್ಕೆ ಮಂಡನೆ ಮಾಡುತ್ತೇವೆ ಎನ್ನುತ್ತಾರೆ. ನೋಡೋಣ ಮುಂದಿನಗಳಲ್ಲಿ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಜಾತಿ ಜನಗಣತಿಗಾಗಿ ಒಂಭತ್ತು ವರ್ಷಗಳೇ ಕಾದಿದ್ದೇವೆ ಇನ್ನೂ ಒಂದು ವಾರಗಳು ಕಾಯಲು ಆಗೋದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago