ರಾಜ್ಯ

ರಾಜ್ಯದ 316 ಕೇಂದ್ರಗಳಲ್ಲಿ ನಾಳೆ ಕೆ-ಸೆಟ್‌ ಪರೀಕ್ಷೆ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ನಾಳೆ ಕೆ-ಸೆಟ್‌ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ.

ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದನ್ನು ಓದಿ: ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ

ಈ ಬಾರಿ ಕೆ-ಸೆಟ್‌ ಪರೀಕ್ಷೆಯಲ್ಲಿ ಮುಖ ಚಹರೆ ಪತ್ತೆ ತಂತ್ರಜ್ಞಾನ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು. ಈ ಹಿಂದಿನ ಎಲ್ಲಾ ಪರೀಕ್ಷೆಗಳಲ್ಲಿ ಇದ್ದಂತೆ ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕಿದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ.

ಒಟ್ಟು 33 ವಿಷಯಗಳಿಗೆ ನಡೆಯಲಿರುವ ಕೆ-ಸೆಟ್‌ ಪರೀಕ್ಷೆಗಾಗಿ 1.36 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

4 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

4 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

4 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

4 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

4 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

4 hours ago