ರಾಜ್ಯ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್

ದಾವಣಗೆರೆ: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

“ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ಧಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ.

ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷ ಬಿ.ಆರ್. ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

32 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

44 mins ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago