ರಾಜ್ಯ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್

ದಾವಣಗೆರೆ: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

“ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ಧಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ.

ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷ ಬಿ.ಆರ್. ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

9 mins ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

6 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

6 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

19 hours ago