ಕಾರವಾರ: ಇಲ್ಲಿನ ಸದಾಶಿವಗಢದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆಯ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಈ ಸೇತುವೆ ಬಳಕೆಯಲ್ಲಿಲ್ಲ ಮತ್ತು ದುರಸ್ತಿ ಕಾರ್ಯ ಕೂಡ ನಡೆಯುತ್ತಿತ್ತು ಎನ್ನಲಾಗಿದೆ.
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದಿರುವುದಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕಾಳಿ ಸೇತುವೆ ಕುಸಿತಗೊಂಡಿತ್ತು. ಕುಸಿದು ಬಿದ್ದಿದ್ದ ಕಾಳಿ ಸೇತುವೆ ದುರಸ್ತಿ ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಪರಿಣಾಮ ಹೊಸ ಸೇತುವೆಗೆ ಸಂಭವಿಸಬಹುದಾದ ಬಹುದೊಡ್ಡ ಅನಾಹುತ ತಪ್ಪಿದೆ.
ಗುರುವಾದ ಇದೇ ಸ್ಲ್ಯಾಬ್ ಮೇಲೆ 4-5 ಕಾರ್ಮಿಕರು ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ದಿನ ರಾತ್ರಿ 12 ಗಂಟೆಯವರೆಗೂ ಕೆಲಸ ನಡೆಸುತ್ತಿದ್ದರು. ಆದರೆ ಶುಕ್ರವಾರ ಅನಾಹುತ ಸಂಭವಿಸುವ ವೇಳೆ ಕೆಲಸಗಾರರಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಳೆದ ಆಗಸ್ಟ್.7ರಂದು ಮಳೆಯ ಅಬ್ಬರಕ್ಕೆ ಕಾಳಿ ಸೇತುವೆ ಕುಸಿದು ಬಿದ್ದಿತ್ತು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…