ಕಾರವಾರ: ಇಲ್ಲಿನ ಸದಾಶಿವಗಢದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆಯ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಈ ಸೇತುವೆ ಬಳಕೆಯಲ್ಲಿಲ್ಲ ಮತ್ತು ದುರಸ್ತಿ ಕಾರ್ಯ ಕೂಡ ನಡೆಯುತ್ತಿತ್ತು ಎನ್ನಲಾಗಿದೆ.
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದಿರುವುದಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕಾಳಿ ಸೇತುವೆ ಕುಸಿತಗೊಂಡಿತ್ತು. ಕುಸಿದು ಬಿದ್ದಿದ್ದ ಕಾಳಿ ಸೇತುವೆ ದುರಸ್ತಿ ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಪರಿಣಾಮ ಹೊಸ ಸೇತುವೆಗೆ ಸಂಭವಿಸಬಹುದಾದ ಬಹುದೊಡ್ಡ ಅನಾಹುತ ತಪ್ಪಿದೆ.
ಗುರುವಾದ ಇದೇ ಸ್ಲ್ಯಾಬ್ ಮೇಲೆ 4-5 ಕಾರ್ಮಿಕರು ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ದಿನ ರಾತ್ರಿ 12 ಗಂಟೆಯವರೆಗೂ ಕೆಲಸ ನಡೆಸುತ್ತಿದ್ದರು. ಆದರೆ ಶುಕ್ರವಾರ ಅನಾಹುತ ಸಂಭವಿಸುವ ವೇಳೆ ಕೆಲಸಗಾರರಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಳೆದ ಆಗಸ್ಟ್.7ರಂದು ಮಳೆಯ ಅಬ್ಬರಕ್ಕೆ ಕಾಳಿ ಸೇತುವೆ ಕುಸಿದು ಬಿದ್ದಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…