ರಾಜ್ಯ

ಕಲಬುರಗಿ: ನೇಣು ಬಿಗಿದು ಪೊಲೀಸ್ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್‌ ಕಾನ್‌ಸ್ಟೇಬಲ್‌ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ.

ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23) ನೇಣುಬಿಗಿದುಕೊಂಡಿದ್ದಾರೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ದೊಡ್ಡೇಶ್(‌40) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್.

ದೊಡ್ಡೇಶ್‌ ನಗರದ ಹೈಕೋರ್ಟ್‌ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದೆ ಶಂಕಿಸಲಾಗಿದೆ. ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಲಬುರಗಿ ವಿ.ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

4 mins ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

16 mins ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

43 mins ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

50 mins ago

ಓದುಗರ ಪತ್ರ: ಬೇಸಿಗೆ ರಜೆ ಅರ್ಥಪೂರ್ಣವಾಗಿರಲಿ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…

1 hour ago

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…

1 hour ago