\
ಪೊಲೀಸ್ ಅಧಿಕಾರಿಯಾಗಬೇಕೆಂಬ ರಾಜ್ಯದ ಹಲವಾರು ವಿದ್ಯಾವಂತರ ಕನಸನ್ನು ಭಗ್ನಗೊಳಿಸಿದ್ದ ಪಿಎಸ್ಐ ಹಗರಣದ ಕಿಂಗ್ಪಿನ್ ಆರ್ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ.
ಈ ಕುರಿತು ಸದ್ಯ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಯುವ ಜನತೆಯ ಭವಿಷ್ಯ ಹಾಳು ಮಾಡಿದವರ ಬಳಿ ಬೆಂಬಲ ಕೇಳುವುದು ಎಷ್ಟು ಸರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಕುರಿತು ಕಾಂಗ್ರೆಸ್ ಸಹ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಬಿಜೆಪಿಯವರೇ ಆತನ ಬ್ಯಾಕ್ಬೋನ್ ಎಂದು ಬರೆದುಕೊಂಡು ಚಾಟಿ ಬೀಸಿದೆ.
ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ: “PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! ನೀವೇ ಆರ್.ಡಿ ಪಾಟೀಲ್ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ. ಬಿಜೆಪಿಯವರೇ, ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ! ಬಿವೈ ವಿಜಯೇಂದ್ರ ಅವರೇ ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ?” ಎಂದು ಬರೆದುಕೊಂಡಿದೆ.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…