\
ಪೊಲೀಸ್ ಅಧಿಕಾರಿಯಾಗಬೇಕೆಂಬ ರಾಜ್ಯದ ಹಲವಾರು ವಿದ್ಯಾವಂತರ ಕನಸನ್ನು ಭಗ್ನಗೊಳಿಸಿದ್ದ ಪಿಎಸ್ಐ ಹಗರಣದ ಕಿಂಗ್ಪಿನ್ ಆರ್ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ.
ಈ ಕುರಿತು ಸದ್ಯ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಯುವ ಜನತೆಯ ಭವಿಷ್ಯ ಹಾಳು ಮಾಡಿದವರ ಬಳಿ ಬೆಂಬಲ ಕೇಳುವುದು ಎಷ್ಟು ಸರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಕುರಿತು ಕಾಂಗ್ರೆಸ್ ಸಹ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಬಿಜೆಪಿಯವರೇ ಆತನ ಬ್ಯಾಕ್ಬೋನ್ ಎಂದು ಬರೆದುಕೊಂಡು ಚಾಟಿ ಬೀಸಿದೆ.
ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ: “PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! ನೀವೇ ಆರ್.ಡಿ ಪಾಟೀಲ್ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ. ಬಿಜೆಪಿಯವರೇ, ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ! ಬಿವೈ ವಿಜಯೇಂದ್ರ ಅವರೇ ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ?” ಎಂದು ಬರೆದುಕೊಂಡಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…