ರಾಜ್ಯ

ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಮನೆಗೆ ಉಮೇಶ್‌ ಜಾಧವ್‌ ಭೇಟಿ

\

ಪೊಲೀಸ್‌ ಅಧಿಕಾರಿಯಾಗಬೇಕೆಂಬ ರಾಜ್ಯದ ಹಲವಾರು ವಿದ್ಯಾವಂತರ ಕನಸನ್ನು ಭಗ್ನಗೊಳಿಸಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಉಮೇಶ್‌ ಜಾಧವ್‌ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ.

ಈ ಕುರಿತು ಸದ್ಯ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಯುವ ಜನತೆಯ ಭವಿಷ್ಯ ಹಾಳು ಮಾಡಿದವರ ಬಳಿ ಬೆಂಬಲ ಕೇಳುವುದು ಎಷ್ಟು ಸರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಕುರಿತು ಕಾಂಗ್ರೆಸ್‌ ಸಹ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ ಬಿಜೆಪಿಯವರೇ ಆತನ ಬ್ಯಾಕ್‌ಬೋನ್‌ ಎಂದು ಬರೆದುಕೊಂಡು ಚಾಟಿ ಬೀಸಿದೆ.

ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಹೀಗಿದೆ: “PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! ನೀವೇ ಆರ್.ಡಿ ಪಾಟೀಲ್‌ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ. ಬಿಜೆಪಿಯವರೇ, ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ! ಬಿವೈ ವಿಜಯೇಂದ್ರ ಅವರೇ ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ?” ಎಂದು ಬರೆದುಕೊಂಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago